ಡಿಕೆ ಶಿವಕುಮಾರ್ 
ರಾಜ್ಯ

ಐಟಿ ದಾಳಿ ಪ್ರಕರಣ; ಹೈಕೋರ್ಟ್ ಮೆಟ್ಟಿಲೇರಿದ ಡಿ.ಕೆ.ಶಿವಕುಮಾರ್

ಆದಾಯಕ್ಕೂ ಮೀರಿ ಅಪರಿಮಿತ ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಹಿರಿಯ ಕಾಂಗ್ರೆಸ್ ಮುಖಂಡ, ಶಾಸಕ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಆದಾಯಕ್ಕೂ ಮೀರಿ ಅಪರಿಮಿತ ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಹಿರಿಯ ಕಾಂಗ್ರೆಸ್ ಮುಖಂಡ, ಶಾಸಕ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 
ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯಲ್ಲಿ ಆದಾಯ ತೆರಿಗೆ ಇಲಾಖೆಯನ್ನು ಪ್ರತಿವಾದಿಯನ್ನಾಗಿಸಲಾಗಿದೆ. 
2017ರಲ್ಲಿ ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಅವರ ಆಪ್ತರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದ ಐಟಿ  ಅಧಿಕಾರಿಗಳು, ಸಚಿವರಿಗೆ ಸೇರಿದ ದೆಹಲಿಯ ನಿವಾಸದ ಮೇಲೂ ದಾಳಿ ನಡೆಸಿ 8.60 ಕೋಟಿ ರೂ.ವಶಕ್ಕೆ ಪಡೆದುಕೊಂಡಿದ್ದರು. 
ಈ ಸಂಬಂಧ ವಿಶೇಷ ನ್ಯಾಯಾಲಯದಲ್ಲಿ ಐಟಿ ಅಧಿಕಾರಿಗಳು, ಸಚಿವ ಡಿ.ಕೆ.ಶಿವಕುಮಾರ್‌,  ಅವರ ಆಪ್ತರಾದ ಸಚಿನ್‌ ನಾರಾಯಣ್‌, ಸುನಿಲ್‌ ಕುಮಾರ್‌ ಶರ್ಮಾ, ಎನ್‌.ರಾಜೇಂದ್ರ, ಆಂಜನೇಯ ಹಾಗೂ ಇತರರನ್ನು ಆರೋಪಿಗಳನ್ನಾಗಿ ಮಾಡಿ ಪ್ರಕರಣ ದಾಖಲಿಸಿದ್ದರು.
 ಈ  ಹಿನ್ನೆಲೆಯಲ್ಲಿ  ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಆರೋಪಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ  ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ  ಡಿ. ಹುದ್ದಾರ ಅರ್ಜಿಯನ್ನು ವಜಾಗೊಳಿಸಿ ಜೂನ್ 25ರಂದು ಆದೇಶಿಸಿದ್ದರು. 
ವಿಶೇಷ ನ್ಯಾಯಾಲಯದ ಆದೇಶ ಕಾನೂನುಬಾಹಿರವಾಗಿದ್ದು, ಅದನ್ನು ತಡೆಹಿಡಿದು, ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡಬೇಕು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!