ರಾಜ್ಯ

ಅಡ್ವೊಕೇಟ್ ಜನರಲ್ ಹುದ್ದೆಗೆ ಉದಯ್ ಹೊಳ್ಳ ರಾಜೀನಾಮೆ

Lingaraj Badiger
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಹಿನ್ನೆಲೆಯಲ್ಲಿ ಆ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 
ರಾಜೀನಾಮೆ ಪತ್ರವನ್ನು ಅವರು ರಾಜ್ಯಪಾಲರಿಗೆ ರವಾನಿಸಿದ್ದಾರೆ. ಇವರು ಎಚ್.ಡಿ.ಕುಮಾರಸ್ವಾಮಿ  ಮುಖ್ಯಮಂತ್ರಿಯಾದ ನಂತರ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. 
ಈಗ ಇವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ನೂತನ ಸರ್ಕಾರ ಹೊಸ ಅಡ್ವೊಕೇಟ್ ಜನರಲ್ ಅವರನ್ನು ನೇಮಿಸಲಿದೆ.
SCROLL FOR NEXT