ಸಾಂದರ್ಭಿಕ ಚಿತ್ರ 
ರಾಜ್ಯ

ಶೀಘ್ರದಲ್ಲಿ ಕೆ. ಆರ್ ಪುರಂ-ವಿಮಾನ ನಿಲ್ದಾಣ ಮಾರ್ಗದಲ್ಲಿ ಹೊಸ ಮೆಟ್ರೊ ನಿಲ್ದಾಣ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದಲ್ಲಿ ಬಗಲೂರು ಕ್ರಾಸ್ ಮತ್ತು ಟ್ರಂಪೆಟ್ ...

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದಲ್ಲಿ ಬಗಲೂರು ಕ್ರಾಸ್ ಮತ್ತು ಟ್ರಂಪೆಟ್ ಜಂಕ್ಷನ್ ಮಧ್ಯೆ ಬೆಟ್ಟಹಲಸೂರು ಹೊಸ ಮೆಟ್ರೊ ನಿಲ್ದಾಣ ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಮೊದಲು ಯೋಜನೆ ಮಾಡಿದಂತೆ ಕಸ್ತೂರಿ ನಗರ ಮತ್ತು ಚನ್ನಸಂದ್ರ ಮೆಟ್ರೊ ನಿಲ್ದಾಣವನ್ನು ಒಟ್ಟು ಸೇರಿಸಿದೆ.
ಇನ್ನು ನಾಲ್ಕು ಮೆಟ್ರೊ ನಿಲ್ದಾಣಗಳನ್ನು ಮರು ನಾಮಕರಣ ಮಾಡುವ ಮೆಟ್ರೊ ರೈಲು ನಿಗಮದ ಪ್ರಸ್ತಾವನೆಗೆ ಕಳೆದ 20ರಂದು ಸರ್ಕಾರ ಆದೇಶ ಹೊರಡಿಸಿದೆ. 
ಈ ಹಿಂದೆ ಅಂದಾಜು ಮಾಡಿದಂತೆ 10 ಸಾವಿರ 584.15 ಕೋಟಿ ವೆಚ್ಚದಲ್ಲಿ 38 ಕಿಲೋ ಮೀಟರ್ ಉದ್ದದ ವಿಮಾನ ನಿಲ್ದಾಣ ಮಾರ್ಗದಲ್ಲಿ 17 ಮೆಟ್ರೊ ನಿಲ್ದಾಣಗಳನ್ನು ಖಾಸಗಿ ಹೂಡಿಕೆಯೊಂದಿಗೆ ನಿರ್ಮಿಸಲಾಗುತ್ತದೆ. ಮುಂದಿನ ಅಕ್ಟೋಬರ್ ಹೊತ್ತಿಗೆ ಕಾಮಗಾರಿಕೆ ಮೆಟ್ರೊ ನಿಗಮ ಟೆಂಡರ್ ಕರೆಯಲಿದೆ ಎಂದು ಅದರ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಥ್ ತಿಳಿಸಿದ್ದಾರೆ.
ಹೊಸ ಮೆಟ್ರೊ ನಿಲ್ದಾಣಗಳ ಸ್ಥಾಪನೆಯಿಂದ ಉತ್ತರ ಯಲಹಂಕ ಭಾಗ ಇನ್ನಷ್ಟು ಅಭಿವೃದ್ಧಿಯಾಗಲಿದೆ. ಕಸ್ತೂರಿ ನಗರ, ಚನ್ನಸಂದ್ರ, ಹೊರಮಾವು, ಬಾಬುಸಾಹೇಬಪಾಳ್ಯ, ಕಲ್ಯಾಣ ನಗರ, ಹೆಚ್ ಬಿಆರ್ ಲೇ ಔಟ್, ನಾಗವಾರ, ವೀರಣ್ಣಪಾಳ್ಯ, ಕೆಂಪಾಪುರ, ಹೆಬ್ಬಾಳ, ಕೊಡಿಗೇಹಳ್ಳಿ, ಜಕ್ಕೂರು ಕ್ರಾಸ್, ಕೊಗಿಲು ಕ್ರಾಸ್, ಬಗಲೂರು/ ಪಿಆರ್ ಆರ್ ಕ್ರಾಸ್, ಟ್ರಂಪೆಟ್ ಜಂಕ್ಷನ್, ಸ್ಕೈ ಗಾರ್ಡನ್, ಏರ್ ಪೋರ್ಟ್ ಟರ್ಮಿನಲ್ ಉದ್ದೇಶಿತ ಹೊಸ ಮೆಟ್ರೊ ನಿಲ್ದಾಣಗಳಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT