ರಾಜ್ಯ

ಬಾಗಲಕೋಟೆ: ಲಂಚ ಸ್ವೀಕರಿಸುತ್ತಿದ್ದಾಗಲೇ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

Raghavendra Adiga
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ ಗ್ರಾಮ ಲೆಕ್ಕಾಧಿಕಾರಿ ಒಬ್ಬರು ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಸುನಗ ಗಾಮಲೆಕ್ಕಾಧಿಕಾರಿ ಎಸ್.ವಿ.ಶಿರೋಳ ಎಂಬುವವರು ಜಗದೀಶ ಎರಡೆಮ್ಮಿ ಎಂಬ ವ್ಯಕ್ತಿಗೆ ಆಸ್ತಿ ಖಾತೆ ಬದಲಾವಣೆ ಮಾಡಿಕೊಡಲು 3 ಸಾವಿರ ರೂ. ಲಂಚದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಜಗದೀಶ್ ಎಸಿಬಿಗೆ ದೂರು ಸಲ್ಲಿಸಿದ್ದರು. ಅದರಂತೆ ಮಂಗಳವಾರ ದಾಳಿ ನಡೆಸಿದ ಎಸಿಬಿ ಪೊಲೀಸರು ಲಂಚ ಸ್ವೀಕರಿಸುತ್ತಿದ್ದ ಲೆಕ್ಕಾಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಎಸಿಬಿ ಡಿವೈಎಸ್ಪಿ ಎಂ.ವಿ.ಮಲ್ಲಾಪೂರ, ಸಿಪಿಐ ಚಂದ್ರಶೇಖರ್ ಮಠಪತಿ, ಇನ್ಸ್ ಪೆಕ್ಟರ್ ಆರ್.ಎಚ್. ಹಳ್ಳೂರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸದ್ಯ ಗಾಮಲೆಕ್ಕಾಧಿಕಾರಿ ಎಸ್.ವಿ.ಶಿರೋಳ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
SCROLL FOR NEXT