ಯು.ಟಿ. ಖಾದರ್ 
ರಾಜ್ಯ

ಟಿಪ್ಪು ಜಯಂತಿ ರದ್ದು: ಬಿಜೆಪಿ ಸರ್ಕಾರದ ವಿರುದ್ಧ ಯು. ಟಿ. ಖಾದರ್ ಆಕ್ರೋಶ

ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರ ಜನ್ಮ ಜಯಂತಿಯನ್ನು ಬಿಜೆಪಿ ಸರ್ಕಾರ ರದ್ದುಗೊಳಿಸುವ ಮೂಲಕ ಸೌಹಾರ್ದ ಬೇಡ ಎನ್ನುವ ಕೆಟ್ಟ ಸಂದೇಶ ರವಾನಿಸಿದೆ ಎಂದು ಶಾಸಕ ಯು. ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು: ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರ ಜನ್ಮ ಜಯಂತಿಯನ್ನು ಬಿಜೆಪಿ ಸರ್ಕಾರ ರದ್ದುಗೊಳಿಸುವ ಮೂಲಕ ಸೌಹಾರ್ದ ಬೇಡ ಎನ್ನುವ ಕೆಟ್ಟ ಸಂದೇಶ ರವಾನಿಸಿದೆ ಎಂದು ಶಾಸಕ ಯು. ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಿಹಾಸ ಮತ್ತು ಚರಿತ್ರೆಯನ್ನು ಯುವಜನಾಂಗ ಅರಿತುಕೊಂಡು ಸೌಹಾರ್ದ ಜೀವನ ನಡೆಸಬೇಕು ಎನ್ನುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಆರಂಭಿಸಿತ್ತು. ಇದರಲ್ಲಿ ಯಾವುದೇ ಧಾರ್ಮಿಕ ಅಂಶ ಇರಲಿಲ್ಲ ಎಂದು ಅವರು ಹೇಳಿದರು.
ಅಖಂಡ ಭಾರತವನ್ನು ಒಗ್ಗೂಡಿಸುವ ಕಾರ್ಯದಲ್ಲೂ ಟಿಪ್ಪು ಸುಲ್ತಾನ್ ಮುಂಚೂಣಿಯಲ್ಲಿದ್ದರು. ಟಿಪ್ಪು ಸರ್ವ ಧರ್ಮ ಸಹಿಷ್ಣು ಆಗಿ ಎಲ್ಲ ಧರ್ಮಗಳ ಜನರಿಗೆ ರಕ್ಷಣೆ ನೀಡಿದ್ದರು. ಟಿಪ್ಪು ಜಯಂತಿ ರದ್ದುಪಡಿಸಿರುವ ಬಿಜೆಪಿಗೆ ಚರಿತ್ರೆ, ಇತಿಹಾಸ, ರಾಷ್ಟ್ರಪ್ರೇಮ, ಸೌಹಾರ್ದ ಬೇಡ ಎನ್ನುವ ಸಂದೇಶ ನೀಡಿರುವುದು ಅದರ ಸಾಧನೆಯಾಗಿದೆ ಎಂದು ಟೀಕಿಸಿದ ಅವರು, ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT