ಬೋಪಯ್ಯ 
ರಾಜ್ಯ

ಟಿಪ್ಪು ಜಯಂತಿ ರದ್ದುಪಡಿಸಿ: ಸಿಎಂಗೆ ವಿಧಾನಸಭೆ ಮಾಜಿ ಸ್ಪೀಕರ್ ಬೋಪಯ್ಯ ಪತ್ರ

ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಿದ್ದ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ವಿರಾಜಪೇಟೆಯ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ....

ಬೆಂಗಳೂರು:  ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಿದ್ದ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ವಿರಾಜಪೇಟೆಯ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲು ಆರಂಭವಾದಾಗಿನಿಂದ ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿವೆ. ಸರ್ಕಾರಿ ಆಸ್ತಿಪಾಸ್ತಿಗೆ ಹಾನಿಯಾಗುತ್ತಿದೆ. ಹೀಗಾಗಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ನಿರ್ಧರಿಸಿ, ಈ ಸಂಬಂಧ ಆದೇಶ ಹೊರಡಿಸಲಾಯಿತು. ಇದು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿತ್ತು. ಬಿಜೆಪಿ ಕಾರ್ಯಕ್ರಮವನ್ನು ಬಹಿಷ್ಕರಿಸಿ ಪ್ರತಿಭಟನೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿತ್ತು. ಆದರೆ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿಯನ್ನು ಆಚರಿಸುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕೂಡ ಟಿಪ್ಪು ಜಯಂತಿಯನ್ನು ಮುಂದುವರಿಸಿದ್ದರು. ಇದೀಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಈ ಹಿಂದೆಯೇ ಬಿಜೆಪಿ ಮುಖಂಡರು, ಪಕ್ಷ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಪಡಿಸುವುದಾಗಿ ಹೇಳಿದ್ದರು. ಇದೀಗ ಈ ನಿಟ್ಟಿನಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT