ಸಂಗ್ರಹ ಚಿತ್ರ 
ರಾಜ್ಯ

ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಇಲ್ಲ: ಕರ್ನಾಟಕ ಸರ್ಕಾರದ ಆದೇಶ

ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡುವಂತಿಲ್ಲ ಎಂದು ಕರ್ನಾಟಕದ ಬಿಜೆಪಿ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಆದೇಶಿಸಿದೆ.

ಬೆಂಗಳೂರು: ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡುವಂತಿಲ್ಲ ಎಂದು ಕರ್ನಾಟಕದ ಬಿಜೆಪಿ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಆದೇಶಿಸಿದೆ.
ರಾಜ್ಯದಲ್ಲಿ ಭಾರಿ ಪರ-ವಿರೋಧಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿ ಆಚರಣೆಗೆ ರಾಜ್ಯದ ಬಿಜೆಪಿ ಸರ್ಕಾರ ಬ್ರೇಕ್ ಹಾಕಿದ್ದು, ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡುವಂತಿಲ್ಲ ಎಂದು ಕರ್ನಾಟಕದ ಬಿಜೆಪಿ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಆದೇಶಿಸಿದೆ.
ಈ ಹಿಂದಷ್ಟೇ ಬಿಜೆಪಿ ಶಾಸಕ ಕೆಜಿ ಬೋಪಯ್ಯ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಟಿಪ್ಪುಜಯಂತಿ ಆಚರಣೆಯನ್ನ ರದ್ದುಪಡಿಸುವಂತೆ ಕೋರಿದ್ದರು. ಪ್ರತಿ ನವೆಂಬರ್​ 10 ರಂದು ಟಿಪ್ಪು ಜಯಂತಿಯನ್ನ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದೆ. ಆದ್ರೆ ಟಿಪ್ಪು ಜಯಂತಿಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಅದನ್ನ ರದ್ದುಪಡಿಸಬೇಕೆಂದು ಕೋರಿ ಪತ್ರ ಬರೆದಿದ್ದರು. 
ಈ ಪತ್ರಕ್ಕೆ ಸ್ಪಂದಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಇದೀಗ ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿತ್ತು ಎಂದು ಹೇಳಲಾಗಿದೆ.
ಈ ಮೊದಲು ಅಲ್ಪಸಂಖ್ಯಾತರ ಇಲಾಖೆಯಿಂದ ಟಿಪ್ಪು ಜಯಂತಿಯನ್ನು ಆಚರಿಸಲಾಗುತ್ತಿತ್ತು. ಬಳಿಕ ಅದನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಿ 2016 ನೇ ಸಾಲಿನಿಂದ ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಮಂಗಳವಾರ ಜಯಂತಿ ರದ್ದುಗೊಳಿಸಿ ಆದೇಶ ಹೊರಡಿಸಿರುವ ಸರ್ಕಾರ, ಕೆ.ಜಿ.ಬೋಪಯ್ಯ ಅವರ ಮನವಿ ಮೇರೆಗೆ ಜಯಂತಿ ರದ್ದುಗೊಳಿಸಿದ್ದು, ಈ  ಬಗ್ಗೆ ಸೋಮವಾರ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT