ಚಿಕ್ಕಮಗಳೂರಿಗೆ ತೆರಳಿದ ಎಸ್.ಎಂ ಕೃಷ್ಣ ದಂಪತಿ 
ರಾಜ್ಯ

ಸಂಜೆ ಸಿದ್ದಾರ್ಥ್ ಅಂತ್ಯಕ್ರಿಯೆ: ಚಿಕ್ಕಮಗಳೂರಿಗೆ ತೆರಳಿದ ಎಸ್ಎಂ ಕೃಷ್ಣ ದಂಪತಿ

ನೇತ್ರಾವತಿ ನದಿಯಲ್ಲಿ ಬಿದ್ದು ಆತ್ಮ ಹತ್ಯೆ ಮಾಡಿಕೊಂಡ ಹಿರಿಯ ಉದ್ಯಮಿ ವಿ ಜಿ ಸಿದ್ದಾರ್ಥ್ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವರ ಮಾವ...

ಬೆಂಗಳೂರು: ನೇತ್ರಾವತಿ ನದಿಯಲ್ಲಿ ಬಿದ್ದು ಆತ್ಮ ಹತ್ಯೆ ಮಾಡಿಕೊಂಡ ಹಿರಿಯ ಉದ್ಯಮಿ ವಿ ಜಿ ಸಿದ್ದಾರ್ಥ್ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವರ ಮಾವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಇಂದು ಅಪರಾಹ್ನ ಚಿಕ್ಕಮಗಳೂರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿದರು.
ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಪತ್ನಿ ಪ್ರೇಮಾ ಕೃಷ್ಣ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಹೆಲಿಕಾಪ್ಟರ್ ಮೂಲಕ ತೆರಳಿದರು.
ಸಿದ್ಧಾರ್ಥ್ ಅವರ ನಾಪತ್ತೆಯಾದ ಬಳಿಕ ತೀವ್ರ ನೋಂದಿರುವ ಎಸ್ ಎಂ ಕೃಷ್ಣ, ನಿನ್ನೆ ರಾತ್ರಿ ತೀವ್ರ ಜ್ವರದಿಂದ ಬಳಲಿದರು ಎನ್ನಲಾಗಿದೆ. ಅವರ ಕುಟುಂಬ ವೈದ್ಯರು ಕೃಷ್ಣ ಅವರನ್ನು ಪರೀಕ್ಷಿಸಿ, ಸೂಕ್ತ ರೀತಿಯಲ್ಲಿ ಆಹಾರ ಮತ್ತು ಔಷಧಿ ಸೇವಿಸುವಂತೆ ಸಲಹೆ ಮಾಡಿದರು ಎನ್ನಲಾಗಿದೆ.
ಕೃಷ್ಣ ಅವರು ಶುಕ್ರವಾರ ರಾತ್ರಿಯಿಂದ ಸಮರ್ಪಕವಾಗಿ ಆಹಾರ ಸೇವಿಸದೇ ರೋಧಿಸುತ್ತಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ಹೇಳಿವೆ. ಇಂದು ಸಂಜೆ ಚಿಕ್ಕಮಗಳೂರಿನಲ್ಲಿ ಸಿದ್ಧಾರ್ಥ್ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ನೆರವೇರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT