ಡಿ ಕೆ ಶಿವಕುಮಾರ್ 
ರಾಜ್ಯ

ಸಿದ್ದಾರ್ಥ್ ರಾಜ್ಯದ ಆಸ್ತಿ, ಐಟಿ ಇಲಾಖೆಯ ಬಗ್ಗೆ ಏನೂ ಹೇಳುವುದಿಲ್ಲ-ಡಿ ಕೆ ಶಿವಕುಮಾರ್

ಉದ್ಯಮಿ ಸಿದ್ಧಾರ್ಥ್ ರಾಜ್ಯದ ಆಸ್ತಿಯಾಗಿದ್ದರು. ರಾಜ್ಯದಲ್ಲಿ ಬೃಹತ್ ಉದ್ಯಮ ಸೃಷ್ಟಿಸಿ ಸಾವಿರಾರು ...

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ರಾಜ್ಯದ ಆಸ್ತಿಯಾಗಿದ್ದರು. ರಾಜ್ಯದಲ್ಲಿ ಬೃಹತ್ ಉದ್ಯಮ ಸೃಷ್ಟಿಸಿ ಸಾವಿರಾರು ಜನರಿಗೆ ಅದರಲ್ಲೂ ಕನ್ನಡಿಗರಿಗೆ ಉದ್ಯಮ ನೀಡಿ, ಸರಳತೆಯಿಂದ ಎಲ್ಲರ ವಿಶ್ವಾಸ ಗಳಿಸಿದ್ದರು, ಇಂದು ಅವರು ಇಲ್ಲ ಎಂದಾಗ ಸುದ್ದಿಯನ್ನು ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಾರ್ಥ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಉದ್ಯಮವನ್ನು ಮುನ್ನಡೆಸುತ್ತಿದ್ದರು. ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಯಶಸ್ವಿ ಉದ್ಯಮಿಯಾಗಿದ್ದರು. ಈ ಮೂಲಕ ಉತ್ತಮ ಜೀವನ ನಡೆಸುತ್ತಿದ್ದರು. ಆದರೆ ಈಗ ಅವರು ನಮ್ಮನ್ನಗಲಿದ್ದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಆದರೆ ಅನಿವಾರ್ಯವಾಗಿ ನಂಬಲೇಬೇಕಾಗಿದೆ. ಭಗವಂತ ಅವರ ಎಲ್ಲಾ ಸ್ನೇಹಿತರು, ಅಭಿಮಾನಿಗಳು, ಸಿಬ್ಬಂದಿ, ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. 
ಆದಾಯ ತೆರಿಗೆ ಬಹಳ ತರಾತುರಿಯಲ್ಲಿ ಸ್ಪಷ್ಟನೆ ನೀಡಿದೆ. ಅವರು ಈಗ ಏನು ಬೇಕಾದರು ಮಾತನಾಡಬಹುದು. ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ. ಈಗ ನಾನು ಇಲಾಖೆಯ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT