ವಿ ಜಿ ಸಿದ್ದಾರ್ಥ್ ಮತ್ತು ಅವರು ಬರೆದಿದ್ದರು ಎನ್ನಲಾದ ಪತ್ರ 
ರಾಜ್ಯ

ಸಿದ್ಧಾರ್ಥ್ ಅವರ ಸಹಿ ಹೊಂದಿಕೆಯಾಗುತ್ತಿಲ್ಲ: ಐಟಿ ಇಲಾಖೆ

ಆತ್ಮಹತ್ಯೆಗೆ ಮುಂಚೆ ವಿ ಜಿ ಸಿದ್ದಾರ್ಥ್ ಅವರು ಬರೆದಿದ್ದರು ಎನ್ನಲಾದ ಡೆತ್ ನೋಟ್ ನಲ್ಲಿ ...

ಬೆಂಗಳೂರು/ನವದೆಹಲಿ: ಆತ್ಮಹತ್ಯೆಗೆ ಮುಂಚೆ ವಿ ಜಿ ಸಿದ್ದಾರ್ಥ್ ಅವರು ಬರೆದಿದ್ದರು ಎನ್ನಲಾದ ಡೆತ್ ನೋಟ್ ನಲ್ಲಿ ಅವರ ಸಹಿ ಅವರು ತಮ್ಮ ವಾರ್ಷಿಕ ವರದಿಯಲ್ಲಿ ಹಾಕಿದ ಸಹಿಯ ಜೊತೆ ಹೊಂದಿಕೆಯಾಗುತ್ತಿಲ್ಲ ಎಂದು ಕರ್ನಾಟಕ, ಗೋವಾ ವಿಭಾಗದ ಆದಾಯ ತೆರಿಗೆ ಇಲಾಖೆಯ ಪ್ರಧಾನ ಮುಖ್ಯ ಆಯುಕ್ತರ ಕಚೇರಿ ಹೇಳಿದ್ದು, ಪತ್ರದ ನಿಖರತೆ ಬಗ್ಗೆ ಅನುಮಾನವಿದೆ ಎಂದು ಹೇಳಿದೆ.
ಸಿದ್ಧಾರ್ಥ್ ಕೆಫೆ ಕಾಫಿ ಡೇ ಸಂಸ್ಥೆಯ ಉದ್ಯೋಗಿಗಳು ಮತ್ತು ನಿರ್ದೇಶಕರ ಮಂಡಳಿಗೆ ಬರೆದಿದ್ದರು ಎಂದು ಹೇಳಲಾಗುವ ಪತ್ರದಲ್ಲಿ ಐಟಿ ಇಲಾಖೆಯ ಮಾಜಿ ಡಿಜಿಯಿಂದ ತೀವ್ರ ಕಿರುಕುಳವಿತ್ತು ಎಂದು ಹೇಳಿದ್ದರು, ಆದರೆ ಹೆಸರನ್ನು ಪ್ರಸ್ತಾಪಿಸಿರಲಿಲ್ಲ.
2017ರ ಸೆಪ್ಟೆಂಬರ್ ತಿಂಗಳಲ್ಲಿ ಕರ್ನಾಟಕ ಮತ್ತು ಗೋವಾ ವೃತ್ತದ ಐಟಿ ಮಹಾ ನಿರ್ದೇಶಕರು ಸಿದ್ಧಾರ್ಥ್ ಅವರ 25ಕ್ಕೂ ಹೆಚ್ಚು ಉದ್ಯಮ ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲು ಆದೇಶಿಸಿದ್ದರು. ಅದರಂತೆ ಐಟಿ ಇಲಾಖೆ ದಾಳಿ ನಡೆಸಿತ್ತು. ದಾಳಿ ಬಳಿಕ ಸಿದ್ಧಾರ್ಥ್ ಅವರು ಐಟಿ ಇಲಾಖೆಗೆ ತೆರಿಗೆ ವಂಚನೆ ಮಾಡಿದ್ದಾರೆ ಮತ್ತು 650 ಕೋಟಿ ರೂಪಾಯಿಗೂ ಅಧಿಕ ವಹಿವಾಟಿಗೆ ತೆರಿಗೆ ಕಟ್ಟಿಲ್ಲ, ಸರಿಯಾದ ಲೆಕ್ಕಪತ್ರ ತೋರಿಸಿಲ್ಲ ಎಂದು ಹೇಳಲಾಗಿತ್ತು. 
ಇದೀಗ ಸಿದ್ಧಾರ್ಥ್ ಅವರ ಆತ್ಮಹತ್ಯೆ ಅವರ ಡೆತ್ ನೋಟ್, ಉದ್ಯಮ ಕ್ಷೇತ್ರದಲ್ಲಿನ ವಹಿವಾಟು, ಉದ್ಯಮಿಗಳ ಮೇಲೆ ಹಣಕಾಸು ಒತ್ತಡಗಳು, ಐಟಿ ಇಲಾಖೆ ಬಗ್ಗೆ ನೂರಾರು ಸಂದೇಹಗಳು, ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT