ಸಿದ್ದಾರ್ಥ್ 
ರಾಜ್ಯ

ಸಿದ್ದಾರ್ಥ್ ಸಾವಿನ ಹಿಂದೆ ಕಾಣದ ಕೈಗಳ ಕೈವಾಡವಿದೆ: ಸಿದ್ದರಾಮಯ್ಯ

ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಳಿಯ ಸಿದ್ದಾರ್ಥ್ ಆತ್ಮಹತ್ಯೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಘಾತ ವ್ಯಕ್ತ ಪಡಿಸಿದ್ದಾರೆ. ...

ಬೆಂಗಳೂರು:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ  ಅಳಿಯ ಸಿದ್ದಾರ್ಥ್ ಆತ್ಮಹತ್ಯೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಘಾತ ವ್ಯಕ್ತ ಪಡಿಸಿದ್ದಾರೆ.  
ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರ ಸಾವು ಎಷ್ಟು ಎಷ್ಟು ದಾರುಣವೋ, ಅದರ ಹಿನ್ನೆಲೆ ಅಷ್ಟೇ ನಿಗೂಢವಾದುದು. ಅವರನ್ನು ಇಂತಹದ್ದೊಂದು ದುರಂತಕ್ಕೆ‌ ತಳ್ಳಿದ ಕಾರಣಗಳು ಮತ್ತು ಅದರ ಹಿಂದಿನ‌ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾದರೆ ಮಾತ್ರ ಅವರಿಗೆ ನಾವು  ನಿಜವಾದ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. 
ವಿ.ಜಿ.ಸಿದ್ಧಾರ್ಥ ಅವರು ಕೊನೆಯಲ್ಲಿ ಬರೆದಿರುವ ಪತ್ರದಲ್ಲಿನ ವಿವರಗಳ, ಅವರ ಸಾವಿಗೆ ಐಟಿ ಇಲಾಖೆಯ ಕಿರುಕುಳ ಕಾರಣವಾಗಿರ ಬಹುದೆಂಬ ಸಂಶಯ ಹುಟ್ಟಿಸುವಂತಿದೆ‌  ಕಳೆದ ಐದು ವರ್ಷಗಳಲ್ಲಿ ಐಟಿ ಇಲಾಖೆಯ ಕಾರ್ಯ ನಿರ್ವಹಣೆ ಈ ಸಂಶಯವನ್ನು ಇನ್ನಷ್ಟು ಪುಷ್ಠೀಕರಿಸುತ್ತದೆ. ಈ ಬಗ್ಗೆ‌‌‌  ನಿಷ್ಪಕ್ಷಪಾತ ತನಿಖೆ ಆಗಲೇಬೇಕು ಎಂದು ಟ್ವಿಟ್ಟರ್ ನಲ್ಲಿ ಒತ್ತಾಯಿಸಿದ್ದಾರೆ.ಜೊತೆಗೆ ಎಸ್ ಎಂ ಕೃಷ್ಣ ಅವರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ