ಸಂಗ್ರಹ ಚಿತ್ರ 
ರಾಜ್ಯ

ಚುನಾವಣಾ ಕರ್ತವ್ಯದ ಬಳಿಕ ಸ್ವಸ್ಥಾನಕ್ಕೆ 16 ಐಎಎಸ್ ಅಧಿಕಾರಿಗಳ ಮರು ನಿಯೋಜನೆ

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ವರ್ಗಾವಣೆಗೊಂಡಿದ್ದ 16 ಐಎಎಸ್ ಅಧಿಕಾರಿಗಳನ್ನು ಸ್ವಸ್ಥಾನಕ್ಕೆ ರಾಜ್ಯ ಸರ್ಕಾರ ವರ್ಗಾಯಿಸಿ ಆದೇಶ ಹೊರಡಿಸಿದೆ.

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ವರ್ಗಾವಣೆಗೊಂಡಿದ್ದ 16 ಐಎಎಸ್ ಅಧಿಕಾರಿಗಳನ್ನು ಸ್ವಸ್ಥಾನಕ್ಕೆ ರಾಜ್ಯ ಸರ್ಕಾರ ವರ್ಗಾಯಿಸಿ ಆದೇಶ ಹೊರಡಿಸಿದೆ.
ಜೆಡಿಎಸ್​-ಕಾಂಗ್ರೆಸ್​ ಮೈತ್ರಿ ಸರ್ಕಾರದಲ್ಲಿ ಪ್ರಮುಖ ಹುದ್ದೆಗಳಲ್ಲಿದ್ದ 18 ಮಂದಿ ಐಎಎಸ್​ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯದ ಮೇರೆಗೆ ಬೇರೆ ಬೇರೆ ಸ್ಥಳಗಳಿಗೆ ನಿಯೋಜನೆಗೊಳಿಸಲಾಗಿತ್ತು. ಇದೀಗ ಆ ಅಧಿಕಾರಿಗಳನ್ನು ವಾಪಸ್ ಸ್ವಸ್ಥಾನಕ್ಕೆ ಕರೆಸಿಕೊಳ್ಳಲಾಗಿದೆ.
ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಇಂತಿದೆ.
1) ಡಾ. ವಿಶಾಲ್- ಗ್ರಾಮೀಣ ನೀರು ಪೂರೈಕೆ ಆಯುಕ್ತರು
2) ಡಿ ರಂದೀಪ್- ಬಿಬಿಎಂಪಿ, ಹೆಚ್ಚುವರಿ ಆಯುಕ್ತ
3) ಡಾ. ಪಿ ಸಿ ಜಾಫರ್- ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು
4) ಪಿ.ಎ. ಮೇಘನ್ನವರ್, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ
5) ತುಷಾರ್​ ಗಿರಿನಾಥ್- ಬಿಡಬ್ಲ್ಯು ಎಸ್​ಎಸ್​ಬಿ , ಅಧ್ಯಕ್ಷರು
6) ಡಾ. ಲೋಕೇಶ್- ಬಿಬಿಎಂಪಿ ಹಣಕಾಸು ಮತ್ತು ಐಟಿ ವಿಶೇಷ ಆಯುಕ್ತ
7) ಟಿ ಕೆ ಅನಿಲ್ ಕುಮಾರ್- ಪ್ರವಾಸೋಧ್ಯಮ ಇಲಾಖೆ, ಕಾರ್ಯದರ್ಶಿ
8) ಯಶವಂತ್, ಮೈಸೂರು ಪ್ರಾದೇಶಿಕ ಆಯುಕ್ತ
9) ಜಿ. ಲಕ್ಷ್ಮೀಕಾಂತ ರೆಡ್ಡಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ವಿಭಾಗ
10) ಎಸ್.ಎಸ್. ನಕುಲ್, ಜೈವಿಕ ತಂತ್ರಜ್ಞಾನ ಮಾಹಿತಿ ತಂತ್ರಜ್ಞಾನ ವಿಭಾಗದ ನಿರ್ದೇಶಕರು
11) ಎಸ್.ಬಿ. ಬೊಮ್ಮನಹಳ್ಳಿ, ಬೆಳಗಾವಿ ಜಿಲ್ಲಾಧಿಕಾರಿ
12) ಅವಿನಾಶ್ ಮೆನನ್, ವಾಣಿಜ್ಯ ತೆರಿಗೆಯ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗದ ಹೆಚ್ಚುವರಿ ಆಯುಕ್ತ
13) ಎಂ.ಕನಗವಲ್ಲಿ - ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆ ಆಯುಕ್ತರು
14) ಯಲಗೌಡ ಶಿವನಗೌಡ ಪಾಟೀಲ್, ವಿಜಯಪುರ ಜಿಲ್ಲಾಧಿಕಾರಿ
15) ಎನ್​​. ಮಂಜುಶ್ರೀ - ಮಂಡ್ಯ ಜಿಲ್ಲಾಧಿಕಾರಿ
16) ಶಿವಯೋಗಿ ಸಿ ಕಳಸದ್​- ಕೆಎಸ್​ಆರ್​ಟಿಸಿ, ಎಂಡಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT