ಶ್ರೀ ವಿಶ್ವೇಶ ತೀರ್ಥ ಪೇಜಾವರ ಸ್ವಾಮೀಜಿ 
ರಾಜ್ಯ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ರಾಹುಲ್ ಗಾಂಧಿ ಬೆಂಬಲಿಸಬೇಕು: ಪೇಜಾವರ ಶ್ರೀ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬೇಕು. ಇದಕ್ಕೆ ಕಾಂಗ್ರೆಸ್‍ನ ರಾಹುಲ್ ಗಾಂಧಿ ಸೇರಿದಂತೆ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಸಂಸದರು ಸಹಕಾರ

ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬೇಕು. ಇದಕ್ಕೆ ಕಾಂಗ್ರೆಸ್‍ನ ರಾಹುಲ್ ಗಾಂಧಿ ಸೇರಿದಂತೆ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಸಂಸದರು ಸಹಕಾರ ನೀಡಬೇಕು ಎಂದು ಉಡುಪಿಯ ಶ್ರೀ ವಿಶ್ವೇಶ ತೀರ್ಥ ಪೇಜಾವರ ಸ್ವಾಮೀಜಿ ಆಗ್ರಹಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು ಕೇವಲ ರಾಹುಲ್ ಗಾಂಧಿ ಮಾತ್ರವಲ್ಲಾ ಎಲ್ಲಾ ಸಂಸದರು ಕೂಡ ಒಟ್ಟಾಗಿ ರಾಮಮಂದಿರ ನಿರ್ಮಾಣ ಮಾಡಲು ಕೈ ಜೋಡಿಸಬೇಕು ಎಂದು ಕರೆ ನೀಡಿದ್ದಾರೆ.
ರಾಜಕೀಯ ಪ್ರಚಾರ ವೇಳೆಯೂ ಅಭಿವೃದ್ಧಿ ಕಡೆಗೆ ಪಕ್ಷಗಳು ಗಮನವೇ ಕೊಡಲಿಲ್ಲ. ಮುಂದಾದರೂ ಅಭಿವೃದ್ಧಿ ಬಗ್ಗೆ ಮಾತನಾಡುವಂತಾಗಬೇಕು. ಹಿಂದೂ ವಿಚಾರ ತೆಗೆದರೆ ಬಹುಸಂಖ್ಯಾತರು ಜಾಗೃತರಾಗುತ್ತಾರೆ. ಪ್ರತ್ಯೇಕ ಹೋರಾಟ ಮಾಡಿದರೆ ವಿಪಕ್ಷಗಳು ಹೆಚ್ಚಿನ ಸೀಟು ಗೆಲ್ಲುತ್ತಿದ್ದವು ಎಂದು ಅಭಿಪ್ರಾಯಪಟ್ಟರು. 
2 ನೇ ಅವಧಿಗೆ ಅಧಿಕಾರ ವಹಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸರಕಾರದಿಂದ ಅಭಿವೃದ್ಧಿ ಕಾರ್ಯಗಳ ನಿರೀಕ್ಷೆಯಲ್ಲಿದ್ದೇವೆ. ದೇಶದ ರಕ್ಷಣೆ, ಕಾಶ್ಮೀರದ ಸಮಸ್ಯೆ ಪರಿಹಾರ ಕಾಣಬೇಕು. ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಕೃಷಿಗೆ ಮಾರಕವಾಗದ ಉದ್ಯಮ ಸ್ಥಾಪನೆಯಾಗಬೇಕೆಂದರು. ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT