ರಾಜ್ಯ

ಡಾ. ಶಿವಕುಮಾರ ಸ್ವಾಮೀಜಿಗೆ 'ಭಾರತ ರತ್ನ ನೀಡಿ': ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಪತ್ರ!

Vishwanath S
ಬೆಂಗಳೂರು: ತ್ರಿವಿಧ ದಾಸೋಹಿ. ನಡೆದಾಡುವ ದೇವರು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರ 'ಭಾರತ ರತ್ನ ಪುರಸ್ಕಾರ' ನೀಡಬೇಕು ಎಂದು ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. 
ಕುಮಾರಸ್ವಾಮಿ ಅವರು ಪತ್ರದಲ್ಲಿ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಬೇಕು ಎಂಬ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಇನ್ನು ರಾಜ್ಯದ ಬಿಜೆಪಿ ನಾಯಕರು ಕೂಡ ಈ ಪ್ರಯತ್ನದಲ್ಲಿ ಸದನದಲ್ಲಿ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
ಪತ್ರದಲ್ಲಿ ಕುಮಾರಸ್ವಾಮಿ ಅವರು ಪತ್ರದಲ್ಲಿ ಐತಿಹಾಸಿಕ ಹಿನ್ನೆಲೆಯನ್ನ ಹೊಂದಿರುವ ತುಮಕೂರು ಸಿದ್ದಗಂಗಾ ಮಠ ಸುಮಾರು 600 ವರ್ಷಗಳ ಇತಿಹಾಸ ಹೊಂದಿದೆ. 1941ರಲ್ಲಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರು ಮಠದ ಜವಾಬ್ದಾರಿಯನ್ನು ಸ್ವೀಕಾರ ಮಾಡಿದ್ದರು. 1908ರ ಏಪ್ರಿಲ್ 1ರಂದು ಶಿವಕುಮಾರ ಸ್ವಾಮೀಜಿಗಳು ಜನಿಸಿದ್ದು ಅವರು ಲಿಂಗೈಕ್ಯರಾಗುವವರೆಗೂ ಮಠವನ್ನು ಮುನ್ನಡೆಸಿ, ಸಾಮಾಜಿಕ ಸೇವೆಯಲ್ಲಿ ಮಾದರಿ ಎನಿಸುವ ಕಾರ್ಯ ಮಾಡಿದ್ದಾರೆ.
ಹೀಗೆ ಕುಮಾರಸ್ವಾಮಿ ಅವರು ತಮ್ಮ ಪತ್ರದಲ್ಲಿ ಸವಿವರವಾಗಿ ಬರೆದಿದ್ದಾರೆ.
SCROLL FOR NEXT