ಸಾಲುಮರದ ತಿಮ್ಮಕ್ಕನಿಂದ ಸಿಎಂ ಕುಮಾರಸ್ವಾಮಿ ಭೇಟಿ 
ರಾಜ್ಯ

ಸಾಲು ಮರದ ತಿಮ್ಮಕ್ಕ ಅವರ ಮನವಿಗೆ ಸ್ಪಂದಿಸಿದ ಸಿಎಂ: ಮರ ಕಡಿಯದಂತೆ ಅಧಿಕಾರಿಗಳಿಗೆ ಸೂಚನೆ

ಕುಂದೂರು-ಹುಲಿಕಲ್ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಯೋಜನೆಗೆ ಬ್ರೇಕ್ ಬಿದ್ದಿದೆ. ಸೋಮವಾರ ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ...

ಬೆಂಗಳೂರು: ಕುಂದೂರು-ಹುಲಿಕಲ್ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಯೋಜನೆಗೆ ಬ್ರೇಕ್ ಬಿದ್ದಿದೆ. ಸೋಮವಾರ ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು  ಗೃಹ ಕಛೇರಿ ಕೃಷ್ಣದಲ್ಲಿ ಭೇಟಿ ಮಾಡಿದರು. ಈ ವೇಳೆ ಮಾಗಡಿ ತಾಲೂಕು ಕುದೂರು-ಹುಲಿಕಲ್ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ತಾನು ನೆಟ್ಟ ಸಾಲುಮರಗಳ ಕಡಿಯಲು ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.
ಈ ತಕ್ಷಣ ಸಿಎಂ ಕುಮಾರಸ್ವಾಮಿ ಸಂಬಂಧಿಸಿದ ಅಧಿಕಾರಿಗಳ ಜತೆ ಮಾತನಾಡಿ ಮರಗಳನ್ನು ಕಡಿಯದಂತೆ ಆದೇಶಿಸಿದ್ದರೆ. ಅಲ್ಲದೆ ಅಗತ್ಯವಾದರೆ ರಸ್ತೆ ಮಾರ್ಗ ಬದಲಿಸುವಂತೆ ಸಹ ಸೂಚಿಸಿದ್ದಾರೆ.
ರಸ್ತೆ ಕಾಮಗಾರಿ ನೆಪದಲ್ಲಿ ತಿಮ್ಮಕ್ಕ ನೆಟ್ಟ ಸಾಲುಮರಗಳಿಗೆ ಕೊಡಲಿ ಏಟು ನೀಡಲು ಸರ್ಕಾರ ಮುಂದಾದ ಕುರಿತಂತೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬೆನ್ನಿಗೇ ಸಿಎಂ ಕುಮಾರಸ್ವಾಮಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT