ಮಳೆಗಾಳಿಗೆ ಬಿದ್ದ ಮರಗಳು 
ರಾಜ್ಯ

ಭಾರೀ ಮಳೆ-ಗಾಳಿಗೆ ಧರೆಗುರುಳಿದ ಮರಗಳು: 1 ಲಕ್ಷ ಸಸಿ ನೆಡಲು ಬಿಬಿಎಂಪಿ ಸಿದ್ಧತೆ

ಇತ್ತೀಚೆಗೆ ಸುರಿದ ಭಾರೀ ಮಳೆ ಗಾಳಿಗೆ ನಗರದಲ್ಲಿ ಹಲವು ಬೃಹತ್ ಮರಗಳು ಧರೆಗುರುಳಿರುವ ಹಿನ್ನೆಲೆಯಲ್ಲಿ ನಗರಾದ್ಯಂತ 1 ಲಕ್ಷ ಸಸಿಗಳನ್ನು ನೆಡಲು ...

ಬೆಂಗಳೂರು: ಇತ್ತೀಚೆಗೆ ಸುರಿದ ಭಾರೀ ಮಳೆ ಗಾಳಿಗೆ ನಗರದಲ್ಲಿ ಹಲವು ಬೃಹತ್ ಮರಗಳು ಧರೆಗುರುಳಿರುವ ಹಿನ್ನೆಲೆಯಲ್ಲಿ ನಗರಾದ್ಯಂತ 1 ಲಕ್ಷ ಸಸಿಗಳನ್ನು ನೆಡಲು ಬಿಬಿಎಂಪಿ ನಿರ್ಧರಿಸಿದೆ.
ಈ ಸಂಬಂಧ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಮಂಗಳವಾರ ತಜ್ಞರ ಜೊತೆ ಸಭೆ ನಡೆಸಿ ಮರಗಳನ್ನು ರಕ್ಷಿಸಲು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದರು. ಸಭೆಯ ನಂತರ ನಗರಾದ್ಯಂತ 1 ಲಕ್ಷ ಗಿಡ ನೆಡಲು ಸುಮಾರು 5 ಕೋಟಿ ರು. ಹಣ ವ್ಯಯಿಸುತ್ತಿದೆ. ಈಗಾಗಲೇ 75 ಸಾವಿರ ಗಿಡಗಳು ಸಿದ್ದವಾಗಿದೆ.
ಬಿಬಿಎಂಪಿ ಅರಣ್ಯ ಇಲಾಖೆ ಬೇವಿನ ಗಿಡ, ಹೊಂಗೆ ಗಿಡ, ಚಂಪಕ, ಪೊಂಗಂ, ಮಹೋಗನಿ, ನೇರಳೆ, ಸಂಪಿಗೆ ಮುಂತಾದ ಹಲವು ಗಿಡಗಳನ್ನು ನೆಡಲು ಸಿದ್ಧತೆ ನಡೆಸಿದೆ. 
ಮೇ 25 ಮತ್ತು 26 ರಂದು ಸುರಿದ ಮಳೆಯಿಂದಾಗಿ 100 ಮರಗಳು ಬುಡ ಸಮೇತ ಉರುಳಿ ಬಿದ್ದಿವೆ, ಸುಮಾರು 80ಕ್ಕೂ ಹೆಚ್ಚು ಮರದ ರೆಂಬೆಗಳು ಬಿದ್ದ ಕಾರಣ ವಿದ್ಯುತ್ ಕಂಬಗಳು ಹಾಗೂ ಎಲೆಕ್ಟ್ರಿಕ್ ವೈರ್ ಗೆ ಹಾನಿಯಾಗಿದೆ,  ಹಲವು ವಾಹನಗಳು ಜಖಂ ಆಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಮರಗಳು ಉರುಳಿ ಬಿದ್ದ ಹಿನ್ನೆಲೆಯಲ್ಲಿ ಪರಿಸರ ಇಲಾಖೆ  ಹಾಗೂ ನಗರ ಸಂರಕ್ಷಣ ಇಲಾಖೆ ಜೊತೆ ಸಭೆ ನಡೆಸಿದ್ದಾಗಿ ಮೇಯರ್ ತಿಳಿಸಿದ್ದಾರೆ.
1ಲಕ್ಷ ಸಸಿ ನೆಡಲು ನಗರದ 8 ವಲಯಗಳಲ್ಲಿ ಟೆಂಡರ್ ಕರೆಯಲಾಗಿದೆ,  4 ವಲಯಗಳಿಗೆ ಈಗಾಗಲೇ ಅನುಮತಿ ನೀಡಲಾಗಿದೆ,. ಸರಿಯಾದ ರೀತಿಯಲ್ಲಿ ಸಸಿ ನೆಟ್ಟು ಅಗತ್ಯ ಕ್ರಮ ತೆಗೆದುಕೊಂಡು ಅವುಗಳನ್ನು ಪೋಷಿಸಿದರೇ ಮರಗಳು ಎಷ್ಟೇ ಮಳೆ ಗಾಳಿ ಬಂದರೂ ಜಗ್ಗುವುದಿಲ್ಲ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಕೆ ಚೋಳ ರಾಜು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT