ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಪೋಲೀಸ್ ಕಾರ್ಯಾಚರಣೆ: 10 ಮಂದಿ ಕುಖ್ಯಾತ ಮನೆಗಳ್ಳರ ಗ್ಯಾಂಗ್ ಸೆರೆ

ರಾಜಾಜಿ ನಗರದ ಮನೆಯೊಂದರಲ್ಲಿ ದರೋಡೆ ಮಾಡಿದ್ದ 10 ಜನ ಕಳ್ಳರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ರಾಜಾಜಿ ನಗರದ ಮನೆಯೊಂದರಲ್ಲಿ ದರೋಡೆ ಮಾಡಿದ್ದ 10 ಜನ ಕಳ್ಳರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.
ಬಸವೇಶ್ವರ ನಗರದ ಕೆ.ಭಾಸ್ಕರ್ (41), ಬಿ.ಆರ್.ಶಶಿಧರ್ (41), ಆನಂದ್ ಎನ್ (30), ಆರ್.ಟಿ.ನಗರದ ಮದನ್ (33), ಪ್ರಕಾಶನಗರದ ಎಂ.ರಂಗನಾಥ್ (31), ಸೂರಿ (36), ಸಂತು (34), ಮಲ್ಲೇಶ್ವರಂದ ಕಿರಣ್ ಹಾಗೂ ರಾಜಾಜಿನಗರದ ರಮೇಶ್ (34) , ಸುರೇಶ್ (30) ಬಂಧಿತ ಆರೋಪಿಗಳು.
ರಾಜಾಜಿನಗರದ 3ನೇ ಬ್ಲಾಕ್ ನ ಎನ್.ಗಿರಿಧರ್ ಎಂಬುವವರು ತಾವು ಮನೆಯಲ್ಲಿ ಇಲ್ಲದಿದ್ದಾಗ ಮೇ.12ರಂದು ಬೆಳಿಗ್ಗೆ 5.30ಗಂಟೆಯಿಂದ 6.30ರ ಸಮಯದಲ್ಲಿ ಒಟ್ಟು 10ರಿಂದ 15ಜನರ ತಂಡ ಮನೆಯ ಗೇಟ್ ಮುರಿದು ಮನೆಗೆ ನುಗ್ಗಿ, ಕಿಟಕಿ- ಬಾಗಿಲುಗಳನ್ನು ಮುರಿದು ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು, ಚಿನ್ನಾಭರಣ, ನಗದು ಹಣ ಸೇರಿ ಸ್ವತ್ತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ ಎಂದು ರಾಜಾಜಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. 
ಪ್ರಕರಣದ ಜಾಡು ಹಿಡಿದ ಪೊಲೀಸರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT