ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಪೋಲೀಸ್ ಕಾರ್ಯಾಚರಣೆ: 10 ಮಂದಿ ಕುಖ್ಯಾತ ಮನೆಗಳ್ಳರ ಗ್ಯಾಂಗ್ ಸೆರೆ

ರಾಜಾಜಿ ನಗರದ ಮನೆಯೊಂದರಲ್ಲಿ ದರೋಡೆ ಮಾಡಿದ್ದ 10 ಜನ ಕಳ್ಳರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ರಾಜಾಜಿ ನಗರದ ಮನೆಯೊಂದರಲ್ಲಿ ದರೋಡೆ ಮಾಡಿದ್ದ 10 ಜನ ಕಳ್ಳರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.
ಬಸವೇಶ್ವರ ನಗರದ ಕೆ.ಭಾಸ್ಕರ್ (41), ಬಿ.ಆರ್.ಶಶಿಧರ್ (41), ಆನಂದ್ ಎನ್ (30), ಆರ್.ಟಿ.ನಗರದ ಮದನ್ (33), ಪ್ರಕಾಶನಗರದ ಎಂ.ರಂಗನಾಥ್ (31), ಸೂರಿ (36), ಸಂತು (34), ಮಲ್ಲೇಶ್ವರಂದ ಕಿರಣ್ ಹಾಗೂ ರಾಜಾಜಿನಗರದ ರಮೇಶ್ (34) , ಸುರೇಶ್ (30) ಬಂಧಿತ ಆರೋಪಿಗಳು.
ರಾಜಾಜಿನಗರದ 3ನೇ ಬ್ಲಾಕ್ ನ ಎನ್.ಗಿರಿಧರ್ ಎಂಬುವವರು ತಾವು ಮನೆಯಲ್ಲಿ ಇಲ್ಲದಿದ್ದಾಗ ಮೇ.12ರಂದು ಬೆಳಿಗ್ಗೆ 5.30ಗಂಟೆಯಿಂದ 6.30ರ ಸಮಯದಲ್ಲಿ ಒಟ್ಟು 10ರಿಂದ 15ಜನರ ತಂಡ ಮನೆಯ ಗೇಟ್ ಮುರಿದು ಮನೆಗೆ ನುಗ್ಗಿ, ಕಿಟಕಿ- ಬಾಗಿಲುಗಳನ್ನು ಮುರಿದು ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು, ಚಿನ್ನಾಭರಣ, ನಗದು ಹಣ ಸೇರಿ ಸ್ವತ್ತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ ಎಂದು ರಾಜಾಜಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. 
ಪ್ರಕರಣದ ಜಾಡು ಹಿಡಿದ ಪೊಲೀಸರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT