ಉಮೇಶ್ ಜಾಧವ್ 
ರಾಜ್ಯ

ಗಂಭೀರವಾಗಿ ಗಾಯಗೊಂಡಿದ್ದವರಿಗೆ ಪ್ರಥಮ ಚಿಕಿತ್ಸೆ ನೀಡಿ ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದ ಸಂಸದ ಉಮೇಶ್ ಜಾಧವ್!

ಅಪಘಾತದಲ್ಲಿ ಗಂಭೀರವಾಗಿ ಗಾಯಕೊಂಡಿದ್ದ ಇಬ್ಬರು ಗಾಯಾಳುಗಳನ್ನು ತಮ್ಮ ಸ್ವಂತ ಕಾರಿನಲ್ಲಿ ಕೂರಿಸಿಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲಿಸುವ ಮೂಲಕ...

ಯಾದಗಿರಿ: ಅಪಘಾತದಲ್ಲಿ ಗಂಭೀರವಾಗಿ ಗಾಯಕೊಂಡಿದ್ದ ಇಬ್ಬರು ಗಾಯಾಳುಗಳನ್ನು ತಮ್ಮ ಸ್ವಂತ ಕಾರಿನಲ್ಲಿ ಕೂರಿಸಿಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲಿಸುವ ಮೂಲಕ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಮಾನವೀಯತೆ ಮೆರೆದಿದ್ದಾರೆ.
ಟೀಕು ರಾಠೋಡ್ ಮತ್ತು ನರೇಂದ್ರ ಎಂಬುವರು ಅರಕೇರಾ ಗ್ರಾಮದ ಬಳಿ ಅಪಘಾತದಲ್ಲಿ ಗಾಯಗೊಂಡು ರಸ್ತೆ ಮೇಲೆ ಮಲಗಿದ್ದರು. ಈ ವೇಳೆ ಈ ಮಾರ್ಗದಲ್ಲಿ ಸಾಗುತ್ತಿದ್ದ ಸಂಸದ ಉಮೇಶ್ ಜಾಧವ್ ಕೂಡಲೇ ಕಾರು ನಿಲ್ಲಿಸಿ ಅವರನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ವಾಪಸ್ ಯಾದಗಿರಿಗೆ ಆಗಮಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ ಗಾಯಾಳುಗಳಿಗೆ ಉಮೇಶ್ ಜಾಧವ್ ಅವರು ಸ್ಥಳದಲ್ಲೇ ಪ್ರಥಮ ಚಿಕಿತ್ಸೆಯನ್ನು ನೀಡಿದ್ದಾರೆ. ಇನ್ನು ಸಂಸದರ ಮಾನವೀಯತೆಯನ್ನು ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT