ಬೆಂಗಳೂರು: ಸಿಎಂ ಕುಮಾರಸ್ವಾಮಿಯಿಂದ ವಿದ್ಯಾರ್ಥಿಗಳಿಗಾಗಿ ಸ್ಮಾರ್ಟ್ ಬಸ್ ಪಾಸ್ ಬಿಡುಗಡೆ 
ರಾಜ್ಯ

ಬೆಂಗಳೂರು: ಸಿಎಂ ಕುಮಾರಸ್ವಾಮಿಯಿಂದ ವಿದ್ಯಾರ್ಥಿಗಳಿಗಾಗಿ ಸ್ಮಾರ್ಟ್ ಬಸ್ ಪಾಸ್ ಬಿಡುಗಡೆ

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸ್ಮಾರ್ಟ್ ಬಸ್ ಪಾಸ್ ಗಳನ್ನು ಪ್ರಾರಂಭಿಸಿದೆ.

ಬೆಂಗಳೂರು: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು  ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸ್ಮಾರ್ಟ್ ಬಸ್ ಪಾಸ್ ಗಳನ್ನು ಪ್ರಾರಂಭಿಸಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ವಿದ್ಯಾರ್ಥಿಗಳ ಸ್ಮಾರ್ಟ್ ಬಸ್ ಪಾಸ್ ಗಳನ್ನು ಬಿಡುಗಡೆಗೊಳಿಸಿದ್ದಾರೆ. ಒಮ್ಮೆ ಈ ಪಾಸ್ ಖರೀದಿಸಿದ ವಿದ್ಯಾರ್ಥಿಗಳು ಆನ್ ಲೈನ್ ನ ಮೂಲಕವೇ ಪಾಸ್ ನವೀಕರಣ ಮಾಡಿಕೊಳ್ಲಲು ಅವಕಾಶವಿದೆ.
ಕಳೆದ ವರ್ಷವೇ ಬಿಎಂಟಿಸಿ ಈ ಉಪಕ್ರಮ ಪ್ರಾರಂಭಿಸಿತ್ತು. ಆದ್ರೆ ತಾಂತ್ರಿಕ ತೊಂದರೆಗಳಿಂದಾಗಿ ಸಂಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿರಲಿಲ್ಲ.
ಶೈಕ್ಷಣಿಕ ಸಂಸ್ಥೆಗಳು ತಮ್ಮ ಶಾಲೆ ಅಥವಾ ಕಾಲೇಜುಗಳನ್ನು ನೋಂದಣಿ ಮಾಡಿಕೊಳ್ಲುವ ಮೂಲಕ ಲಾಗಿನ್ ಐಡಿ ಪಾಸ್ ವರ್ಡ್ ಪಡೆದುಕೊಳ್ಲಬಹುದು.www.mybmtc.com ಗೆ ಭೇಟಿ ನೀಡುವ ಮೂಲಕ ವಿದ್ಯಾರ್ಥಿಗಳು ಪಾಸ್ ಗಾಗಿ ಆನ್ ಲೈನ್ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಸಂಸ್ಥೆಗಳ ನೋಡಲ್ ಅಧಿಕಾರಿಗಳು ವಿದ್ಯಾರ್ಥಿ ಆನ್ ಲೈನ್ ಪಾಸ್ ಪಡೆಯುವುದಕ್ಕೆ ಅನುಮತಿಸುವುದು ಕಡ್ಡಾಯ ಸ್ಮಾರ್ಟ್ ಕಾರ್ಡ್ ನೀಡಲ್ಪಟ್ಟ ದಿನಾಂಕ ಮತ್ತು ಅದನ್ನೆಲ್ಲಿ ಪಡೆದುಕೊಳ್ಳಬೇಕು  ಎಂಬುದರ ಬಗ್ಗೆ ವಿದ್ಯಾರ್ಥಿಯ ಮೊಬೈಲ್ ಗೆ ಸಂದೇಶ ಕಳಿಸಲಾಗುತ್ತದೆ. ಬಿಎಂಟಿಸಿ ಇದಕ್ಕಾಗಿ 26 ವಿವಿಧ ಪ್ರದೇಶಗಳಲ್ಲಿ 92 ಪಾಸ್ ಕೌಂಟರ್ ಗಳನ್ನು ತೆರೆಯುತ್ತಿದೆ. 2018-19ರಲ್ಲಿ ಸ್ಮಾರ್ಟ್ ಕಾರ್ಡ್ ಸ್ವೀಕರಿಸಿದ ವಿದ್ಯಾರ್ಥಿಗಳು ಬರುವ ವರ್ಷ ಅದನ್ನು ಆನ್ ಲೈನ್ ಮೂಲಕ ನವೀಕರಣ ಮಾಡಿಕೊಳ್ಳಬಹುದು.
ಪ್ರತಿಭಟನೆ
ವಿದ್ಯಾರ್ಥಿ ಪಾಸ್ ವಿತರಣೆ ವಿಳಂಬ ಖಂಡಿಸಿಬಿಎಂಟಿಸಿ ವಿರುದ್ಧ  ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲಿದ್ದಾರೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ಜಿಲ್ಲಾಧ್ಯಕ್ಷ ಸಿತಾರ ಪತ್ರಿಕೆಗೆ ತಿಳಿಸಿದ್ದಾರೆ. ಪಿಯು ವಿದ್ಯಾರ್ಥಿಗಳು ಕಳೆದ ವರ್ಷ ನೀಡಲ್ಪಟ್ಟ ಸ್ಮಾರ್ಟ್ ಬಸ್ ಪಾಸ್ ತೋರಿಸಿ ಪ್ರಯಾಣಿಸಬಹುದೆಂದು ಬಿಎಂಟಿಸಿ ಹೇಳಿದ್ದರೂ ಇದು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಅನ್ವಯವಾದಂತೆ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆಗುತ್ತಿಲ್ಲ. ಅವರು ಕಾಲೇಜು ಬದಲಿಸಿದ್ದರೆ ಆ ಪಾಸ್ ಅನ್ವಯವಾಗುವುದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!