ರಾಜ್ಯ

ರಾಮನಗರದಲ್ಲಿ ತಿರುಪತಿ ಮಾದರಿ ದೇವಾಲಯ- ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

Nagaraja AB
ಬೆಂಗಳೂರು: ರಾಮನಗರದಲ್ಲಿ ತಿರುಪತಿ ಮಾದರಿಯ ದೇವಸ್ಥಾನ ನಿರ್ಮಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಉತ್ಸಾಹ ತೋರಿದ್ದು, ಈ ಸಂಬಂಧ ಆದಷ್ಟು ಶೀಘ್ರ ಜಮೀನು ಗುರುತಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್ ವತಿಯಿಂದ ರಾಮನಗರ ಜಿಲ್ಲೆಯಲ್ಲಿ ವೆಂಕಟೇಶ್ವರ ದೇವಸ್ಥಾನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ 15 ಎಕರೆ ಜಮೀನು ಗುರಿತಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ  ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ನಡೆದ ಸಚಿವರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. 
SCROLL FOR NEXT