ಖ್ಯಾತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಬೆಂಗಳೂರು: ಕನ್ನಡ ಸಾರಸ್ವತ ಲೋಕದ ಮೇರು ಪ್ರತಿಭೆಯಾಗಿದ್ದ ಗಿರೀಶ್ ಕಾರ್ನಾಡ್ ಸೋಮವಾರ ಅಸುನೀಗಿದ್ದಾರೆ. ಕಾರ್ನಾಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
"ಎಲ್ಲಾ ವಿಭಾಗಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಗಿರೀಶ್ ಕಾರ್ನಾಡ್ ಅವರನ್ನು ಅವರ ಬಹುಮುಖಿ ಪ್ರತಿಭೆಯ ಖಾರಣ ಸ್ಮರಿಸಿಕೊಳ್ಳುತ್ತೇನೆ. ತಮಗೆ ಇಷ್ಟವಾದ ವಿಚಾರದ ಬಗೆಗೆ ಅವರು ಬಹಳ ಉತ್ಕಟತೆಯಿಂದ ಮಾತನ್ನಾಡುತ್ತಿದ್ದರು.ಅವರ ಕೆಲಸಗಳು ಹಲವಾರು ವರ್ಷಗಳ ಕಾಲ ಜನರ ನೆನಪಲ್ಲಿ ಉಳಿಯಲಿದೆ. ಅವರ ಸಾವಿನಿಂದ ದುಃಖವಾಗಿದೆ.ಅವರ ಆತ್ಮಕ್ಕೆ ಶಾಂತಿ ದೊರಕಲಿ" ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಾರ್ನಾಡರು ಸೋಮವಾರ ಬೆಳಿಗ್ಗೆ ಬೆಂಗಳೂರಿನ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos