ಆಸ್ತಿ ಮಾಲೀಕ ನಿರ್ಮಿಸುತ್ತಿದ್ದ ರಸ್ತೆ 
ರಾಜ್ಯ

ಕೊಡಗು: ರಾಜಕೀಯ ಪ್ರಭಾವ, ಕೆಲಸದಿಂದ ವಜಾಗೊಳ್ಳುವ ಭೀತಿಯಲ್ಲಿ ಅರಣ್ಯಾಧಿಕಾರಿಗಳು

ವಿರಾಜಪೇಟೆ ವಲಯದ ಅರಣ್ಯಾಧಿಕಾರಿಗಳು ತಮ್ಮಗೆ ವಹಿಸಿರುವ ಡ್ಯೂಟಿ ಮಾಡಿ ಇದೀಗ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಕೊಡಗು: ವಿರಾಜಪೇಟೆ ವಲಯದ ಅರಣ್ಯಾಧಿಕಾರಿಗಳು ತಮ್ಮಗೆ ವಹಿಸಿರುವ ಡ್ಯೂಟಿ ಮಾಡಿ ಇದೀಗ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. 
ಮಕುಟಾ ವಲಯದ ಆಸ್ತಿಯ ಮಾಲೀಕರೊಬ್ಬರ ಮೇಲೆ ಪ್ರಕರಣ ದಾಖಲಿಸಿದ ಎಸಿಎಫ್ ಹಾಗೂ ರೆಂಜರ್ ಅವರನ್ನೊಳಗೊಂಡ ತಂಡ ಅಪರಾಧಕ್ಕಾಗಿ ಬಳಸಿದ ಜೆಸಿಬಿ ಯಂತ್ರವೊಂದನ್ನು ವಶಪಡಿಸಿಕೊಂಡಿತ್ತು. 
ಜನವರಿ 2019ರಂದು ದಾಖಲಾಗಿರುವ ದೂರಿನಂತೆ ಯಾವುದೇ ರಸ್ತೆ ಮಾಡುವುದಕ್ಕೆ ವಿನಾಯಿತಿ ಇಲ್ಲದಿದ್ದರೂ  ಆ ಮಾಲೀಕ ತನ್ನ ಆಸ್ತಿ ಇರುವವರೆಗೂ ಹೊಸದಾಗಿ ರಸ್ತೆ ನಿರ್ಮಿಸುತ್ತಿದ್ದ. ಇದಕ್ಕೆ  ಸ್ಥಳೀಯ ಅರಣ್ಯಾಧಿಕಾರಿಗಳಿಂದ ವಿರೋಧ ವ್ಯಕ್ತವಾಗಿತ್ತು.
ಆದರೆ, ಈಗ ಆ ಆಸ್ತಿ ಮಾಲೀಕ  ಕೆಲ ರಾಜಕೀಯ ಮುಖಂಡರ ಪ್ರಭಾವದಿಂದ ಸರ್ಕಾರದ ಮೇಲೆ ಒತ್ತಡ ಹೇರಿ ಆ ವಲಯದ ಕೆಲ ಆಯ್ದ ಅಧಿಕಾರಿಗಳ ವರ್ಗಾವಣೆ ಮಾಡಿಸಲು ಪ್ರಯತ್ನಿಸುತ್ತಿದ್ದಾರೆ ಎದು ಕೊಡಗು ಜಿಲ್ಲೆಯ ಪರಿಸರ ಹೋರಾಟಗಾರರೊಬ್ಬರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಕಾಂಗ್ರೆಸ್ ನಾಯಕರೊಬ್ಬರು ಅರಣ್ಯ ಸಚಿವ ಸತೀಶ್ ಜಾರಕಿಹೊಳಿಗೆ ಪತ್ರ ಬರೆದು ವಿರಾಜಪೇಟೆ ವಲಯದಲ್ಲಿರುವ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾ ಮಾಡುವಂತೆ ಒತ್ತಡ ಹಾಕಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ತಮ್ಮ ಕೆಲಸ ಮಾಡಿದ್ದಕ್ಕೆ ಅರಣ್ಯಾಧಿಕಾರಿಗಳಿಗೆ  ಶಿಕ್ಷೆ ಹಾಗೂ ಕಾನೂನು ಉಲ್ಲಂಘಿಸುವವರನ್ನು ರಕ್ಷಿಸುವಲ್ಲಿ ರಾಜಕೀಯ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. 
ಮಲನಾಡು ಜಿಲ್ಲೆಯಲ್ಲಿ ಅವರು ಅಪಾರ ಪ್ರಮಾಣದ ಆಸ್ತಿಪಾಸ್ತಿ ಹೊಂದಿದ್ದು, ಅಲ್ಲಿಗೆ ಹೋಗಲು ಸರಿಯಾದ ರಸ್ತೆಗಳಿಲ್ಲ. ಆದಕ್ಕಾಗಿ ಪ್ರಭಾವ ಬಳಸಿ ರಸ್ತೆ ನಿರ್ಮಿಸಲು ಬೇಡಿಕೆ ಸಲ್ಲಿಸುತ್ತಿದ್ದಾರೆ ಎಂದು ಪರಿಸರ ಪ್ರೇಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT