ರಾಜ್ಯ

ಅಕ್ರಮ ಆಸ್ತಿ ಸಂಗ್ರಹ ದೂರು: ಪ್ರೊಫೆಸರ್ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ಎಸಿಬಿ ದಾಳಿ

Sumana Upadhyaya
ಬೆಂಗಳೂರು: ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರೊಫೆಸರ್ ಸೇರಿ ಮೂವರು ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಭ್ರಷ್ಟಾಚಾರ ತಡೆ ವಿಭಾಗದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. 
ಕರ್ನಾಟಕ ಯೂನಿವರ್ಸಿಟಿಯ ಪ್ರೊಫೆಸರ್ ಕಲ್ಲಪ್ಪ ಎಂ ಹೊಸಮೈ ಅವರ ನಿವಾಸ, ಮಂಗಳೂರಿನ ಗಣಿ ಮತ್ತು ಭೂಗರ್ಭ ಇಲಾಖೆಯ ಅಧಿಕಾರಿ ಮಹದೇವಪ್ಪ ಹಾಗೂ ಉತ್ತರ ಕನ್ನಡದ ಜೊಯ್ಡಾದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಕಾರಿ ಎಂಜಿನಿಯರ್ ಉದಯ್ ಡಿ ಚಬ್ಬಿ ಅವರ ನಿವಾಸ ಮತ್ತು ಕಚೇರಿಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ಧಾರವಾಡ, ಬೆಳಗಾವಿ ಮತ್ತು ದಾಂಡೇಲಿ ಹಾಗೂ ಇನ್ನೂ ಎರಡು ಕಡೆಗಳಲ್ಲಿ ದಾಳಿ ಮುಂದುವರಿದಿದೆ. ಹೆಚ್ಚಿನ ಮಾಹಿತಿ ಸಿಗಬೇಕಿದೆ.
SCROLL FOR NEXT