ಜಿಂದಾಲ್ ಕಂಪನಿ 
ರಾಜ್ಯ

ಜಿಂದಾಲ್ ಸ್ಟೀಲ್ ಗೆ ಜಮೀನು ಮಾರಾಟಕ್ಕೆ ಹೊಸ ತಿರುವು: ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ

ಜಿಂದಾಲ್ ಸ್ಟೀಲ್ ಕಂಪನಿಗೆ ಗುತ್ತಿಗೆ ನೀಡಿದ್ದ 3,667 ಎಕರೆ ಜಮೀನು ಮಾರಾಟ ಪ್ರಕರಣಕ್ಕೆ ತಡೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ....

ಬೆಂಗಳೂರು: ಜಿಂದಾಲ್ ಸ್ಟೀಲ್ ಕಂಪನಿಗೆ ಗುತ್ತಿಗೆ ನೀಡಿದ್ದ 3,667 ಎಕರೆ ಜಮೀನು ಮಾರಾಟ ಪ್ರಕರಣಕ್ಕೆ ತಡೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ.
ಈ ಸಂಬಂಧ ಕಡತವನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸುವಂತೆ ಹಾಗೂ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಮ್ಮತಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಕೈಗಾರಿಕೆ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಜೊತೆ ಈ ಬಗ್ಗೆ ಸುಧೀರ್ಘ ಸಮಾಲೋಚನೆ ನಡೆಸಿದರು ಎನ್ನಲಾಗಿದೆ.
ಸಭೆಯ ಬಳಿಕ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್ ಸ್ಟೀಲ್ ಕಂಪನಿಗೆ ಪರಭಾರೆ ಮಾಡುವ ತೀರ್ಮಾನ ಕೈಗೊಂಡಿರುವ ಮೇ 27ರ ಸಚಿವ ಸಂಪುಟ ನಿರ್ಣಯವನ್ನು ಮರು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಸಹಮತಿ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪರಮೇಶ್ವರ್ ಹಾಗೂ ಜಾರ್ಜ್ ಅವರ ಜೊತೆ ಜಿಂದಾಲ್ ಸಂಸ್ಥೆಗೆ ಭೂಮಿ ಪರಬಾರೆ ಬಗ್ಗೆ ಚರ್ಚೆ ನಡೆಸಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ .

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT