ಜಿಂದಾಲ್ ಕಂಪನಿ 
ರಾಜ್ಯ

ಜಿಂದಾಲ್ ಸ್ಟೀಲ್ ಗೆ ಜಮೀನು ಮಾರಾಟಕ್ಕೆ ಹೊಸ ತಿರುವು: ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ

ಜಿಂದಾಲ್ ಸ್ಟೀಲ್ ಕಂಪನಿಗೆ ಗುತ್ತಿಗೆ ನೀಡಿದ್ದ 3,667 ಎಕರೆ ಜಮೀನು ಮಾರಾಟ ಪ್ರಕರಣಕ್ಕೆ ತಡೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ....

ಬೆಂಗಳೂರು: ಜಿಂದಾಲ್ ಸ್ಟೀಲ್ ಕಂಪನಿಗೆ ಗುತ್ತಿಗೆ ನೀಡಿದ್ದ 3,667 ಎಕರೆ ಜಮೀನು ಮಾರಾಟ ಪ್ರಕರಣಕ್ಕೆ ತಡೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ.
ಈ ಸಂಬಂಧ ಕಡತವನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸುವಂತೆ ಹಾಗೂ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಮ್ಮತಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಕೈಗಾರಿಕೆ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಜೊತೆ ಈ ಬಗ್ಗೆ ಸುಧೀರ್ಘ ಸಮಾಲೋಚನೆ ನಡೆಸಿದರು ಎನ್ನಲಾಗಿದೆ.
ಸಭೆಯ ಬಳಿಕ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್ ಸ್ಟೀಲ್ ಕಂಪನಿಗೆ ಪರಭಾರೆ ಮಾಡುವ ತೀರ್ಮಾನ ಕೈಗೊಂಡಿರುವ ಮೇ 27ರ ಸಚಿವ ಸಂಪುಟ ನಿರ್ಣಯವನ್ನು ಮರು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಸಹಮತಿ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪರಮೇಶ್ವರ್ ಹಾಗೂ ಜಾರ್ಜ್ ಅವರ ಜೊತೆ ಜಿಂದಾಲ್ ಸಂಸ್ಥೆಗೆ ಭೂಮಿ ಪರಬಾರೆ ಬಗ್ಗೆ ಚರ್ಚೆ ನಡೆಸಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?