ಪರೀಕ್ಷೆ ಪಾಸಾಗಲು ಹಣ ಕೊಟ್ಟರೆ ಅದು ತಿರುಪತಿ ಹುಂಡಿಗೆ : ಹೆಚ್.ಡಿ.ರೇವಣ್ಣ 
ರಾಜ್ಯ

ಪರೀಕ್ಷೆ ಪಾಸಾಗಲು ಹಣ ಕೊಟ್ಟರೆ ಅದು ತಿರುಪತಿ ಹುಂಡಿಗೆ: ಹೆಚ್.ಡಿ.ರೇವಣ್ಣ

ಪರೀಕ್ಷೆಯಲ್ಲಿ ಹಣ ಕೊಟ್ಟು ಉತ್ತೀರ್ಣರಾಗಲು ಪ್ರಯತ್ನಿಸಿದರೆ ಅಂತಹವರ ಹಣ ತಿರುಪತಿ ಹುಂಡಿಗೆ ಹೋದಂತೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಇಲಾಖೆಯಲ್ಲಿ ಖಾಲಿ ಇರುವ ಇಂಜಿನಿಯರ್ ಗಳ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪರೀಕ್ಷೆ ನಡೆಸಿ ಭರ್ತಿಮಾಡಿಕೊಳ್ಳುತ್ತಿದ್ದು, ಪರೀಕ್ಷೆಯಲ್ಲಿ ಹಣ ಕೊಟ್ಟು ಉತ್ತೀರ್ಣರಾಗಲು ಪ್ರಯತ್ನಿಸಿದರೆ ಅಂತಹವರ ಹಣ ತಿರುಪತಿ ಹುಂಡಿಗೆ ಹೋದಂತೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ.  
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಜೂನ್ 21 ರಿಂದ 23 ರವರೆಗೆ ಪರೀಕ್ಷೆ ನಡೆಸಲಾಗುತ್ತಿದ್ದು, ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರ ಅಗತ್ಯ ಸಿದ್ಧತೆ ಕೈಗೊಂಡಿದೆ. ಇದರಲ್ಲಿ ಇಲಾಖೆಯ ಯಾವುದೇ ಪಾತ್ರವಿಲ್ಲ ಎಂದರು.  
750 ಹಿರಿಯ, 350 ಕಿರಿಯ ಅಭಿಯಂತರರ ಹುದ್ದೆಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 200 ಅಂಕಗಳಿಗೆ ಪರೀಕ್ಷೆ ಬರೆಯಬೇಕಾಗುತ್ತದೆ.  ಯಾರ ಹಸ್ತಕ್ಷೇಪ ಅಥವಾ ಅಕ್ರಮವಿಲ್ಲದೆ ಪರೀಕ್ಷೆ ನಡೆಯಬೇಕು. ಒಂದು ವೇಳೆ ಪರೀಕ್ಷೆ ಸಮಯದಲ್ಲಿ ಅಕ್ರಮಗಳು ನಡೆದಲ್ಲಿ ಅದಕ್ಕೆ ಸಂಬಂಧಪಟ್ಟವರನ್ನೇ ಹೊಣೆ ಮತ್ತು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ ಸಚಿವರು ಸ್ಪಷ್ಟಪಡಿಸಿದರು.
ಯಾರ ಶಿಫಾರಸು ಇಲ್ಲದೇ ನೇರವಾಗಿ ಪರೀಕ್ಷೆ ಬರೆದು ಅರ್ಹರಾದವರು ಮಾತ್ರ ಲೋಕೋಪಯೋಗಿ ಇಲಾಖೆಗೆ ಸೇರಬಹುದಾಗಿದೆ.  ಪರೀಕ್ಷೆಯಲ್ಲಿ ತೇರ್ಗಡೆಯಾಗಲು, ಇಲಾಖೆ ಅಭಿಯಂತರರಾಗಿ ಸೇವೆ ಸಲ್ಲಿಸಲು ಹಣ ಕೊಟ್ಟು, ಕಳೆದುಕೊಂಡರೆ ಅದಕ್ಕೆ ಅಭ್ಯರ್ಥಿಗಳೇ ಹೊಣೆ. ಹಣ ಕೊಟ್ಟರೆ ಅದು ತಿರುಪತಿ ಹುಂಡಿಗೆ ಹೋದಂತೆ ಎಂದು ಹೆಚ್.ಡಿ.ರೇವಣ್ಣ ಎಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT