ಎಎಸ್ ಕನ್ವೆಷನ್ ಹಾಲ್ ನಲ್ಲಿ 3ನೇ ದಿನವೂ ದೂರು ಸ್ವೀಕರಣೆ 
ರಾಜ್ಯ

ಐಎಂಎ ವಂಚನೆ ಪ್ರಕರಣ: 2 ದಿನದಲ್ಲಿ 20 ಸಾವಿರ ದೂರು ದಾಖಲು, ಇನ್ನೂ ಕಡಿಮೆಯಾಗಿಲ್ಲ ದೂರುದಾರರ ಸರತಿ ಸಾಲು!

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 2 ದಿನಗಳಿಂದ ನಡೆಯುತ್ತಿರುವ ಪೊಲೀಸರ ದೂರು ಸ್ವೀಕಾರ ಪ್ರಕ್ರಿಯೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈ ವರೆಗೂ ಬರೊಬ್ಬರಿ 20 ಸಾವಿರಕ್ಕೂ ಅಧಿಕ ದೂರುಗಳು ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 2 ದಿನಗಳಿಂದ ನಡೆಯುತ್ತಿರುವ ಪೊಲೀಸರ ದೂರು ಸ್ವೀಕಾರ ಪ್ರಕ್ರಿಯೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈ ವರೆಗೂ ಬರೊಬ್ಬರಿ 20 ಸಾವಿರಕ್ಕೂ ಅಧಿಕ ದೂರುಗಳು ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
20 ಸಾವಿರಕ್ಕೂ ಹೆ್ಚ್ಚು ದೂರು ಸಲ್ಲಿಕೆಯಾದ ಬಳಿಕವೂ ಹಣ ಕಳೆದುಕೊಂಡಿರುವ ನೂರಾರು ಹೂಡಿಕೆದಾರರು ದೂರು ನೀಡಲು ಮುಂದಾಗುತ್ತಿದ್ದಾರೆ. ಶಿವಾಜಿನಗರದ ಎಎಸ್ ಕನ್ವೆಷನ್ ಹಾಲ್ ನಲ್ಲಿ 3ನೇ ದಿನವೂ ದೂರು ಸ್ವೀಕರಣೆ ಮುಂದುವರೆದಿದ್ದು, ಇಂದೂ ಕೂಡ ನೂರಾರು ಮಂದಿ ಸರತಿ ಸಾಲಲ್ಲಿ ನಿಂತು ದೂರು ಸಲ್ಲಿಕೆಗೆ ಮುಂದಾಗಿದ್ದಾರೆ. ನೆರೆಯ ರಾಜ್ಯಗಳು ಹಾಗೂ ಹೊರ ದೇಶಗಳವರೂ ಕಂಪನಿಯಲ್ಲಿ ಹೂಡಿಕೆ ಮಾಡಿ ವಂಚನೆಗೆ ಒಳಗಾಗಿದ್ದು, ಅವರೆಲ್ಲ ಕುಟುಂಬ ಸಮೇತವಾಗಿ ನಗರಕ್ಕೆ ಬಂದು ದೂರು ನೀಡುತ್ತಿದ್ದಾರೆ. ಮದುವೆ, ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ–ಹೀಗೆ ಹಲವು ಉದ್ದೇಶಕ್ಕಾಗಿ ಹಣ ಹೂಡಿಕೆ ಮಾಡಿದ್ದ ಜನ ಈಗ ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ.
ಈ ಬಗ್ಗೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್ ಅವರು, ಪ್ರಕರಣದಲ್ಲಿ ಎಷ್ಟು ಮಂದಿ ಹಣ ಕಳೆದುಕೊಂಡಿದ್ದಾರೆ ಎಂಬ ಅಂದಾಜೇ ಸಿಗುತ್ತಿಲ್ಲ. ಈಗಲೂ ಸಾವಿರಾರು ಮಂದಿ ದೂರು ನೀಡಲು ಸರತಿ ಸಾಲಲ್ಲಿ ನಿಲ್ಲುತ್ತಿದ್ದಾರೆ. ಅಲ್ಲದೆ ನೆರೆ ರಾಜ್ಯಗಳಿಂದಲೂ ಜನ ಆಗಮಿಸುತ್ತಿದ್ದು, ದೂರು ನೀಡಲು ಮುಂದಾಗಿದ್ದಾರೆ. ದೂರು ಸ್ವೀಕಾರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಹಗರಣದ ಗಾತ್ರದ ಬಗ್ಗೆ ತಿಳಿಯಲಿದೆ ಎಂದು ಹೇಳಿದ್ದಾರೆ.
ಅಂತೆಯೇ ವಂಚನೆ ಪ್ರಕರಣ ಸಂಬಂಧ ಐಎಂಎ ಸಂಸ್ಥೆಯ ದಾಖಲೆಗಳನ್ನು ವಶಪಡಿಸಿಕೊಳ್ಳುವ ಕಾರ್ಯ ಶೀಘ್ರ ನಡೆಯಲಿದೆ ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT