ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾದ ಮುಸಲ್ಮಾನ ಮಹಿಳೆಯರು 
ರಾಜ್ಯ

ಉತ್ತಮ ಮಳೆಗೆ ಗದಗದಲ್ಲಿ ಮುಸಲ್ಮಾನ ಮಹಿಳೆಯರಿಂದ ಹನುಮ ದೇವನಿಗೆ ಪೂಜೆ!

ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಪ್ರತಿ ಬೇಸಿಗೆಯಲ್ಲಿ ...

ಗದಗ: ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಪ್ರತಿ ಬೇಸಿಗೆಯಲ್ಲಿ ನೀರಿನ ಸಮಸ್ಯೆಯಿರುವುದರಿಂದ ಇಲ್ಲಿನ ಜನರು ವರುಣ ದೇವನಿಗೆ ಹಲವು ರೀತಿಯಲ್ಲಿ ಮೊರೆ ಹೋಗುತ್ತಾರೆ. 
ಗದಗ ಜಿಲ್ಲೆಯ ರೋಣ ತಾಲ್ಲೂಕಿನ ನಿವಾಸಿಗಳು ಕೂಡ ಹೀಗೆ ಹತ್ತು ಹಲವು ಸಂಪ್ರದಾಯ, ಪೂಜೆ, ಆಚರಣೆಗಳನ್ನು ಮಾಡುತ್ತಾರೆ. ಈ ವರ್ಷ ಇಲ್ಲಿನ ಶ್ರೀನಗರದ ಮುಸ್ಲಿಂ ಮಹಿಳೆಯರು ವರುಣ ದೇವನನ್ನು ಸಂತೃಪ್ತಿಪಡಿಸಲು ಮಾರುತಿ ದೇವಸ್ಥಾನದಲ್ಲಿ ಹನುಮ ದೇವನ ಮೊರೆ ಹೋಗಿದ್ದಾರೆ.
ಈ ಪೂಜೆ ಕಾರ್ಯಕ್ರಮ ನಡೆದಿದ್ದು ಕಳೆದ ವಾರ, ಸೋಷಿಯಲ್ ಮೀಡಿಯಾದಲ್ಲಿ ಇದರ ಫೋಟೋ ವೈರಲ್ ಆದ ನಂತರ ಇದು ಪ್ರಚಾರಕ್ಕೆ ಬಂದಿದೆ. ಶ್ರೀನಗರ ನಿವಾಸಿಗಳು ಕಳೆದ ಶನಿವಾರ ಮಾರುತಿ ದೇವಸ್ಥಾನಕ್ಕೆ ಬಂದು ಈ ವರ್ಷ ಚೆನ್ನಾಗಿ ಮಳೆ-ಬೆಳೆಯಾಗಲಿ ಎಂದು ಹನುಮ ದೇವರಿಗೆ ಮೊರೆ ಹೋಗಿದ್ದಾರೆ. ದೇವಸ್ಥಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದವರಲ್ಲಿ ಮುಸ್ಲಿಂ ಮಹಿಳೆಯರು ಕೂಡ ಇದ್ದರು ಎನ್ನುವುದು ವಿಶೇಷ.
ಕಳೆದ ನಾಲ್ಕೈದು ವರ್ಷಗಳಿಂದ ನಮಗೆ ಸಾಕಷ್ಟು ಮಳೆ ಬಂದಿಲ್ಲ. ಹಿಂದೆ, ಇಲ್ಲಿನ ಜನರು ಜಾತಿ, ಮತ, ಧರ್ಮದ ಬೇಧಗಳಿಲ್ಲದೆ ಒಟ್ಟಿಗೆ ಸಾಮರಸ್ಯದಿಂದ ಜೀವನ ನಡೆಸುತ್ತಿದ್ದರು. ಇಂದು ತಲೆಮಾರು ಬದಲಾಗಿದೆ. ಸಾಮರಸ್ಯ, ಒಗ್ಗಟ್ಟು ಕಾಪಾಡಿಕೊಳ್ಳಬೇಕಿದೆ. ನಾವು ಕೋಮು ಸೌಹಾರ್ದತೆಯನ್ನು ಕಾಪಾಡಿಕೊಂಡರೆ ದೇವರು ನಮ್ಮನ್ನು ಹರಸುತ್ತಾರೆ. ಹೀಗಾಗಿ ನಾವು ಮಾರುತಿ ದೇವಸ್ಥಾನಕ್ಕೆ ಹೋಗಿ ದೇವರಿಗೆ ಪೂಜೆ ಸಲ್ಲಿಸುತ್ತೇವೆ ಎನ್ನುತ್ತಾರೆ ರಂಜನಬಿ ಬದಿನ್.
ದೇವರೆಲ್ಲಾ ಒಂದೇ, ಇಲ್ಲಿ ಮೂರ್ತಿ, ದೇವಸ್ಥಾನ ನಿಮಿತ್ತ ಮಾತ್ರ ಎನ್ನುತ್ತಾರೆ ಕಟುನಾಬಿ ಮುಗಲಿ. ಹನುಮ ದೇವಸ್ಥಾನದಲ್ಲಿ ಬಂದು ನಾವು ಕೂಡ ಪೂಜೆಯಲ್ಲಿ ಭಾಗಿಯಾಗುತ್ತೇವೆ ಎಂದು ಮುಸಲ್ಮಾನ ಮಹಿಳೆಯರು ಕೇಳಿಕೊಂಡಾಗ ನಾವು ಸಂತೋಷದಿಂದ ಅವರನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋದೆವು. ಅಲ್ಲಿ ವಿಶೇಷ ಪೂಜೆ ಮಾಡಿಸಿದರು. ಇಂತಹ ಮನೋಧರ್ಮ ಸಮಾಜಕ್ಕೆ ಒಳ್ಳೆಯದಾಗಿದ್ದು ಈ ಸುದ್ದಿ ಎಲ್ಲೆಡೆ ಹಬ್ಬಿದ್ದು ಒಳ್ಳೆಯದಾಯಿತು ಎನ್ನುತ್ತಾರೆ ಮೀನಾಕ್ಷಿ ಶಿವಶಿಂಪಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT