ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಐಎಂಎ ವಂಚನೆ ಪ್ರಕರಣ, ಆಡಿಟರ್ ಇಕ್ಬಾಲ್ ಖಾನ್ ಎಸ್ಐಟಿ ವಶಕ್ಕೆ

ಐಎಂಎ ಕಂಪನಿಯ ಕೋಟ್ಯಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಆಡಿಟರ್ ಇಕ್ಬಾಲ್ ಖಾನ್ ಅವರನ್ನು ಎಸ್ಐಟಿ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಬೆಂಗಳೂರು : ಐಎಂಎ ಕಂಪನಿಯ ಕೋಟ್ಯಂತರ ರೂಪಾಯಿ  ಹಗರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಆಡಿಟರ್ ಇಕ್ಬಾಲ್ ಖಾನ್ ಅವರನ್ನು ಎಸ್ಐಟಿ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. 
ಐಎಂಎ ಕಂಪನಿ ಮಾಲೀಕ ಮುಹ್ಮದ್ ಮನ್ಸೂರ್ ಖಾನ್ ಹೂಡಿಕೆದಾರರ ಹಣ ದೋಚಿ ದುಬೈಗೆ ಪರಾರಿಯಾಗಿದ್ದಾರೆಂದು ತಿಳಿದು ಬಂದಿದ್ದು, ಕಂಪನಿಯ ಆಡಿಟ್ ವ್ಯವಹಾರಗಳನ್ನು ಇಕ್ಬಾಲ್ ಖಾನ್ ನೋಡಿಕೊಳ್ಳುತ್ತಿದ್ದರು. 
ಕಂಪನಿಯ ವಂಚನೆ ಪ್ರಕರಣ ಬೆಳಕಿಗೆ ಬಂದ ನಂತರ ಇಕ್ಬಾಲ್ ಖಾನ್ ನಾಪತ್ತೆಯಾಗಿದ್ದ. ಗುರುವಾರ ತಡರಾತ್ರಿ ಫ್ರೇಜರ್ ಟೌನ್ ನ ನಿವಾಸದಲ್ಲಿ ಇಕ್ಬಾಲ್ ಖಾನ್ ಅವರನ್ನು ವಶಕ್ಕೆ ಪಡೆಯಲಾಗಿದೆ. 
ಬುಧವಾರವಷ್ಟೇ ಸಂಸ್ಥೆಯ ಏಳು ಜನ ನಿರ್ದೇಶಕರಾದ ನಿಜಾಮುದ್ದೀನ್ ಖಾನ್, ನಾಸಿರ್ ಹುಸೇನ್, ನವೀದ್ ಅಹ್ಮದ್, ಅರ್ಷದ್ ಖಾನ್, ವಾಸಿಂ, ಅನ್ಸರ್ ಪಾಷಾ ಮತ್ತು ದಾದಾ ಪೀರ್ ಅವರನ್ನು ಕರ್ಮಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದರು.ಗುರುವಾರ ನ್ಯಾಯಾಲಯ ಅವರನ್ನು 10 ದಿನಗಳ ಕಾಲ ಎಸ್ಐಟಿ ವಶಕ್ಕೆ ಒಪ್ಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India vs South Africa: ತವರಿನಲ್ಲಿ ಭಾರತಕ್ಕೆ ಮುಖಭಂಗ: ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಬವುಮಾ ಪಡೆ!

‘ಭಾರತದ ಒಂದೇ ಜಿಲ್ಲೆಗೆ 2,20,000 H-1B ವೀಸಾ ಮಂಜೂರು’: ದೊಡ್ಡ ಪ್ರಮಾಣದ ಹಗರಣ, ಯುಎಸ್ ಅರ್ಥಶಾಸ್ತ್ರಜ್ಞ ಡಾ.ಡೇವ್ ಬ್ರಾಟ್ ಆರೋಪ

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಜನಸ್ನೇಹಿ ಅಧಿಕಾರಿ ಪ್ರಾಣ ಕಸಿದ ಶ್ವಾನ: ಮುಗಿಲು ಮುಟ್ಟಿದ ಬೀಳಗಿ ಕುಟುಂಬಸ್ಥರ ಆಕ್ರಂದನ; ಬಡತನದಲ್ಲಿ ಅರಳಿದ್ದ ಧೀಮಂತ ಪ್ರತಿಭೆ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

SCROLL FOR NEXT