ಎಸ್ ಎ ಮಳಗಲಿ 
ರಾಜ್ಯ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಸ್ ಎ ಮಳಗಲಿ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಗಾಂಧಿವಾದಿ ಸೋಮಲಿಂಗಪ್ಪ ಅಪ್ಪಣ್ಣ ಮಳಗಲಿ ಅವರು ಕಳೆದ ರಾತ್ರಿ ವಯೋ ಸಹಜ ಕಾಯಿಲೆಯಿಂದ ನಿಧನ ಹೊಂದಿದ್ದು...

ಬೆಳಗಾವಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಗಾಂಧಿವಾದಿ ಸೋಮಲಿಂಗಪ್ಪ ಅಪ್ಪಣ್ಣ  ಮಳಗಲಿ ಅವರು ಕಳೆದ ರಾತ್ರಿ  ವಯೋ ಸಹಜ ಕಾಯಿಲೆಯಿಂದ ನಿಧನ ಹೊಂದಿದ್ದು, ಅವರಿಗೆ 97 ವರ್ಷ ವಯಸ್ಸಾಗಿತ್ತು.  
ಮೃತರು ಪತ್ನಿ, ಒಬ್ಬ ಮಗ ಮತ್ತು ಏಳು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರರೂ ಅಗಿದ್ದ ಅವರು ಹುಡಾಲಿ ಗ್ರಾಮಕ್ಕೆ ಸೇರಿದವರಾಗಿದ್ದು, ಕೆಲವು ವರ್ಷಗಳಿಂದ ಬೆಳಗಾವಿಯಲ್ಲಿ ನೆಲೆಸಿದ್ದರು. 
ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪ್ರಭಾವದಿಂದ ಅವರು ತಮ್ಮ 17 ನೇ ವಯಸ್ಸಿನಲ್ಲಿ ಸ್ವಾತಂತ್ರ್ಯ ಚಳವಳಿಗೆ ಧುಮುಕಿ  1942 ರಲ್ಲಿ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿ ಸೆರೆವಾಸ ಅನುಭವಿಸಿದ್ದರು.
ನಂತರ ಅವರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಹುದಲಿ   ಗ್ರಾಮೋದ್ಯೋಗ ಸಂಘವನ್ನು ತಮ್ಮ ಹುಟ್ಟೂರು ಹುಡಾಲಿಯಲ್ಲಿ ಪ್ರಾರಂಭಿಸಿ ಅದರ ಅಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿ 31 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಜಿಲ್ಲಾ ಆಡಳಿತ ಮತ್ತು ಹಲವಾರು ಸಂಘಟನೆಗಳ ಸನ್ಮಾನಕ್ಕೆ ಅವರು ಪಾತ್ರರಾಗಿದ್ದರು.
ರಂಗನಾಥ್ ವಡವಿ ಅವರೊಂದಿಗೆ 'ಸಚಿತ್ರ ಭಾರತ್- ಸ್ವಾತಂತ್ರ್ಯ ಸಂಗ್ರಾಮದ  ಇತಿಹಾಸ ಮತ್ತು ಗಾಂಧೀಜಿ' ಎಂಬ ಪುಸ್ತಕ ಬರೆದಿದ್ದು,  ಇದನ್ನು  ಹಿಂದಿ ಮತ್ತು ಇಂಗ್ಲಿಷ್‌ಗೆ ಅನುವಾದಿಸಲಾಗಿತ್ತು.  ಶುಕ್ರವಾರ ಹುಡಾಲಿ ಗ್ರಾಮದಲ್ಲಿ ಅವರ ಅಂತಿಮ ವಿಧಿವಿಧಾನಗಳು ಜರುಗಿದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT