ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನ ಕೆರೆಗಳ ಪತ್ತೆಗೆ ಷೆರ್ಲಾಕ್ ಹೋಮ್ಸ್ ಬರಬೇಕೇ: ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಬೆಂಗಳೂರಿನಲ್ಲಿ ಕೆರೆಗಳ ಶೋಧಕ್ಕಾಗಿ ನ್ಯಾಷನಲ್ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ (ಎನ್ಇಇಆರ್ಐ) ನೇಮಕ ಮಾಡಲು ಯಾವುದೇ ಆಕ್ಷೇಪಣೆ ಇಲ್ಲ ಎಂದು ರಾಜ್ಯ ಸರ್ಕಾರ....

ಬೆಂಗಳೂರು: ಬೆಂಗಳೂರಿನಲ್ಲಿ ಕೆರೆಗಳ ಶೋಧಕ್ಕಾಗಿ ನ್ಯಾಷನಲ್ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ (ಎನ್ಇಇಆರ್ಐ) ನೇಮಕ ಮಾಡಲು ಯಾವುದೇ ಆಕ್ಷೇಪಣೆ ಇಲ್ಲ ಎಂದು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್ ಗೆ ತಿಳಿಸಿದೆ. ಒಳಚರಂಡಿ ನೀರು ಕೆರೆಗಳನ್ನು ಪ್ರವೇಶಿಸುವುದನ್ನು ತಡೆಯಲು ಆ ಮೂಲಕ ಅಂತರ್ಜಲ ಮಟ್ಟ ಕುಸಿತವನ್ನು ತಡೆಗಟ್ಟಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸರ್ಕಾರದ  ಪರ ವಕೀಲರು ನ್ಯಾಯಾಲಯಕ್ಕೆ ಈ ಮೇಲಿನಂತೆ ತಿಳಿಸಿದೆ.
ನ್ಯಾಯಾಲಯವು ಎನ್ಇಇಆರ್ಐ ಗಳನ್ನು ನೇಮಕ ಮಾಡಿದರೆ ಯಾವ ಆಕ್ಷೇಪವಿಲ್ಲ ಎಂದು ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಇದಕ್ಕೆ ಮುನ್ನ .ಕೆರೆಗಳ ಲೆಕ್ಕಪರಿಶೋಧನೆಗಾಗಿ ಎನ್ಇಇಆರ್ಐ ಗಳನ್ನೇಕೆ ನೇಮಕ ಮಾಡಬರದು ಎಂದು ನ್ಯಾಯಾಲಯ ಕೇಳಿದೆ. ಅಲ್ಲದೆ ಕಳೆದ ನಾಲ್ಕೂವರೆ ವರ್ಷಗಳಲ್ಲಿ 15 ಕೆರೆಗಳು ಕಣ್ಮರೆಯಾಗಿದೆ ಎಂದು ಬಿಬಿಎಂಪಿನೀಡಿದ ಅಂಕಿಅಂಶಗಳಉಲ್ಲೇಖಿಸಿ ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ.
ಈ ಕುರಿತಂತೆ ಸೋಮವಾರ ತಾನು ಆದೇಶ ಹೊರಡಿಸುತ್ತೇನೆ ಎಂದು ಹೇಲೀದ್ದ ನ್ಯಾಯಾಲಯ ಇದರೊಡನೆಯೇ "ಬೆಂಗಳೂರಿನಲ್ಲಿ ಕೆರೆಗಳನ್ನು ಪತ್ತೆ ಹಚ್ಚಲು ನಾವು ಷರ್ಲಾಕ್ ಹೋಮ್ಸ್ ನಂತಹಾ ವ್ಯಕ್ತಿಯನ್ನು ಹುಡುಕಬೇಕಾಗಿದೆ." ಎಂದು ಅಭಿಪ್ರಾಯಪಟ್ಟಿದೆ.ವಿಚಾರಣೆಯನ್ನು ಜೂನ್ 17ಕ್ಕೆ ಮುಂದೂಡಿದ ನ್ಯಾಯಾಲಯ ಒಂದೊಮ್ಮೆ ಸರ್ಕಾರ ಕೆರೆಗಳ  ನಿರ್ವಹಣೆ, ಪುನಃಸ್ಥಾಪನೆ ಮಾಡದೆ ಹೋದಲ್ಲಿ ಸಾರ್ವಜನಿಕ ನಂಬಿಕೆಯನ್ನುಕಳೆದುಕೊಳ್ಲಬೇಕಾಗುವುದು ಎಂದು ಎಚ್ಚರಿಸಿದೆ.
ಈ ಹಿಂದಿನ ಕೆರೆ ಅಭಿವೃದ್ಧಿ ಪ್ರಾಧಿಕಾರದಿಂದ ತಯಾರಿಸಿದ ವರದಿಯ ಪ್ರತಿವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.ಬೆಂಗಳೂರಿನಲ್ಲಿ 374 ಕೆರೆಗಳಿದೆ ಎಂದು ವರದಿಯಲ್ಲಿ ಹೇಳಿದೆ.ಆದರೆ ಕೆರೆ ಅಭಿವೃದ್ದಿ ಪ್ರಾಧಿಕಾರ ಈಗ ನ್ಯ್ನತೆ ಅನುಭವಿಸುತ್ತಿರುವ ಕಾರಣ ರಾಜ್ಯ ರಾಜಧಾನಿಯಲ್ಲಿರುವ ಕೆರೆಗಳ ತಿಗತಿಯ ಕುರಿತಾದ ವರದಿಯ ವಿವರಗಳನ್ನು ಒದಗಿಸುವಂತೆ ನ್ಯಾಯಾಲಯವು ಸರ್ಕಾರಿ ವಕೀಲರನ್ನು ಕೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT