ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ: ಮಾಜಿ ಶಾಸಕ ರಮಾನಾಥ ರೈಗೆ ಸಮನ್ಸ್ 
ರಾಜ್ಯ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ: ಮಾಜಿ ಶಾಸಕ ರಮಾನಾಥ ರೈಗೆ ಸಮನ್ಸ್

ಯುವ ಬ್ರಿಗೇಡ್ ಮಾರ್ಗದರ್ಶಕ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ವಆಚ್ಯ ಪದ ಬಲಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಮಾನಾಥ ರೈಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಮಂಗಳೂರು: ಯುವ ಬ್ರಿಗೇಡ್ ಮಾರ್ಗದರ್ಶಕ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ವಆಚ್ಯ ಪದ ಬಲಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಮಾನಾಥ ರೈಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ರಮಾನಾಥ ರೈ ಸಚಿವರಾಗಿದ್ದ ವೇಳೆ ಅನೈಗೋಳಿಯಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸೂಲಿಬೆಲೆ ಬಗೆಗೆ ಅವಾಚ್ಯ ಹಾಗೂ ಮಾನಹಾನಿ ಪದ ಬಳಕೆ ಮಾಡಿದ್ದರೆಂದು ಆರೋಪವಿದ್ದು ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಂಗಳುರಿನ  ಜೆಎಂಎಫ್ ಸಿ ಎರಡನೇ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಛಾ ಉಪಾಧ್ಯಕ್ಷರಾದ ರಹೀಂ ಉಚ್ಚಿಲ್ ಅವರು ರೈ ವಿರುದ್ಧ ಪ್ರಕರಣ ದಾಖಲಿಸಿದ್ದರು.ಶನಿವಾರ ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ರೈ ವಿರುದ್ಧ ಪ್ರಕರಣ ದಾಖಲಿಸುಂತೆ ಸೂಚಿಸಿದೆಯಲ್ಲದೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ರೈ ಅವರಿಗೆ ಸಮನ್ಸ್ ನೀಡಿದೆ.
ನ್ಯಾಯಾಲಯದ ಆದೇಶದ ಅನುಸಾರ ಮಾಜಿ ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಮಾನನಷ್ಟ್, ಅವಾಚ್ಯ ಪದ ಪ್ರಯೋಗ ಎರಡು ಅಪರಾಧಕ್ಕಾಗಿ  ಐಪಿಸಿ ಸೆಕ್ಷನ್ 500 (ಮಾನಹಾನಿ) ಮತ್ತು 504ರ ಅಡಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?