ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ: ಮಾಜಿ ಶಾಸಕ ರಮಾನಾಥ ರೈಗೆ ಸಮನ್ಸ್ 
ರಾಜ್ಯ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ: ಮಾಜಿ ಶಾಸಕ ರಮಾನಾಥ ರೈಗೆ ಸಮನ್ಸ್

ಯುವ ಬ್ರಿಗೇಡ್ ಮಾರ್ಗದರ್ಶಕ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ವಆಚ್ಯ ಪದ ಬಲಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಮಾನಾಥ ರೈಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಮಂಗಳೂರು: ಯುವ ಬ್ರಿಗೇಡ್ ಮಾರ್ಗದರ್ಶಕ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ವಆಚ್ಯ ಪದ ಬಲಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಮಾನಾಥ ರೈಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ರಮಾನಾಥ ರೈ ಸಚಿವರಾಗಿದ್ದ ವೇಳೆ ಅನೈಗೋಳಿಯಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸೂಲಿಬೆಲೆ ಬಗೆಗೆ ಅವಾಚ್ಯ ಹಾಗೂ ಮಾನಹಾನಿ ಪದ ಬಳಕೆ ಮಾಡಿದ್ದರೆಂದು ಆರೋಪವಿದ್ದು ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಂಗಳುರಿನ  ಜೆಎಂಎಫ್ ಸಿ ಎರಡನೇ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಛಾ ಉಪಾಧ್ಯಕ್ಷರಾದ ರಹೀಂ ಉಚ್ಚಿಲ್ ಅವರು ರೈ ವಿರುದ್ಧ ಪ್ರಕರಣ ದಾಖಲಿಸಿದ್ದರು.ಶನಿವಾರ ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ರೈ ವಿರುದ್ಧ ಪ್ರಕರಣ ದಾಖಲಿಸುಂತೆ ಸೂಚಿಸಿದೆಯಲ್ಲದೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ರೈ ಅವರಿಗೆ ಸಮನ್ಸ್ ನೀಡಿದೆ.
ನ್ಯಾಯಾಲಯದ ಆದೇಶದ ಅನುಸಾರ ಮಾಜಿ ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಮಾನನಷ್ಟ್, ಅವಾಚ್ಯ ಪದ ಪ್ರಯೋಗ ಎರಡು ಅಪರಾಧಕ್ಕಾಗಿ  ಐಪಿಸಿ ಸೆಕ್ಷನ್ 500 (ಮಾನಹಾನಿ) ಮತ್ತು 504ರ ಅಡಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT