ಮನ್ಸೂರ್ ಖಾನ್ 
ರಾಜ್ಯ

ಐಎಂಎ ವಂಚನೆ ಪ್ರಕರಣ: ಮನ್ಸೂರ್ ಖಾನ್‌ಗೆ ಇಡಿ ನೋಟಿಸ್

ಐಎಂಎ ವಂಚನೆ ಪ್ರಕರಣದ ರೂವಾರಿ, ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ಹಾಗೂ ಇತರೆ ಏಳು ಜನರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ...

ಬೆಂಗಳೂರು: ಐಎಂಎ ವಂಚನೆ ಪ್ರಕರಣದ ರೂವಾರಿ, ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ಹಾಗೂ ಇತರೆ ಏಳು ಜನರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಐಎಂಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ಖಾನ್ ಹಾಗೂ ಏಳು ಜನರ ವಿರುದ್ಧ ದೂರು ದಾಖಲಿಸಿದ್ದ ಇಡಿ, ಇದೀಗ ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ನೋಟಿಸ್ ನೀಡಿದೆ.
ಫೆಮಾ ಕಾಯಿದೆ ಉಲ್ಲಂಘಿಸಿ ವಿದೇಶಿ ಹೂಡಿಕೆ, ವಿದೇಶಿ ವಿನಿಮಯ, ವಿದೇಶಿ ವಹಿವಾಟು ನಡೆಸಿದ ಆರೋಪದ ಮೇರೆಗೆ ನೊಟೀಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮನ್ಸೂರ್ ಖಾನ್ ಹಾಗೂ ಇತರರ ವಿರುದ್ಧ ದೂರು ದಾಖಲಿಸಿದ್ದ ಇಡಿ ಅಧಿಕಾರಿಗಳು ನಿನ್ನೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಕೆಲವು ಮಾಹಿತಿ ಸಂಗ್ರಹಿಸಿದ ನಂತರ ಪ್ರಕರಣದ ಎಲ್ಲಾ ಆರೋಪಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಸಾವಿರಾರು ಹೂಡಿಕೆದಾರರಿಗೆ ಹಣ ಹಿಂದುರಿಗಿಸದೆ ಮನ್ಸೂರ್ ಖಾನ್ ವಿದೇಶಕ್ಕೆ ಪರಾರಿಯಾಗಿದ್ದು, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ತನಿಖಾ ತಂಡ ತನಿಖೆಯನ್ನು ತೀವ್ರಗೊಳಿಸಿದ್ದು, ನಿನ್ನೆ ಖಾನ್‌ನ ಮೂರನೇ ಪತ್ನಿಯ ಮನೆ ಮೇಲೆ ದಾಳಿ ನಡೆಸಿ, ಚಿನ್ನಾಭರಣ ವಶಪಡಿಸಿಕೊಂಡಿತ್ತು. 40,600 ಮಂದಿ ಐಎಂಎಯಲ್ಲಿ ಹೂಡಿಕೆ ಮಾಡಿರುವುದಾಗಿ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT