ಮೊಹಮ್ಮದ್ ಮನ್ಸೂರ್ ಖಾನ್ 
ರಾಜ್ಯ

ಐಎಂಎ ವಂಚನೆ: ಮನ್ಸೂರ್ ಖಾನ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಗೆ ಎಸ್ ಐಟಿ ಮನವಿ

40 ಸಾವಿರ ಹೂಡಿಕೆದಾರರಿಗೆ ಸಾವಿರಾರು ಕೋಟಿ ರುಪಾಯಿ ಪಂಗನಾಮ ಹಾಕಿ ನಾಪತ್ತೆಯಾಗಿರುವ ಐಎಂಎ ಜ್ಯುವೆಲ್ಸ್ ಮಾಲೀಕ...

ಬೆಂಗಳೂರು: 40 ಸಾವಿರ ಹೂಡಿಕೆದಾರರಿಗೆ ಸಾವಿರಾರು ಕೋಟಿ ರುಪಾಯಿ ಪಂಗನಾಮ ಹಾಕಿ ನಾಪತ್ತೆಯಾಗಿರುವ ಐಎಂಎ ಜ್ಯುವೆಲ್ಸ್ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್ ಅವರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ವಿಶೇಷ ತನಿಖಾ ತಂಡ(ಎಸ್ಐಟಿ ಕೇಂದ್ರ ಗೃಹ ಸಚಿವಾಲಯ ಮತ್ತು ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದೆ.
ಸಾವಿರಾರು ಜನರಿಗೆ ಪಂಗನಾಮ ಹಾಕಿ ಜೂನ್ ಮೊದಲ ವಾರದಲ್ಲಿ ವಿದೇಶಕ್ಕೆ ತೆರಳಿರುವ ಮನ್ಸೂರ್ ಖಾನ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ನಾವು ಕೇಂದ್ರ ಗೃಹ ಸಚಿವಾಲಯಕ್ಕೆ ಮತ್ತು ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿದ್ದೇವೆ ಎಂದು ಎಸ್ಐಟಿ ಮುಖ್ಯಸ್ಥ ಡಿಐಜಿ ರವಿಕಾಂತೇಗೌಡ ಅವರು ತಿಳಿಸಿದ್ದಾರೆ.
ಸಾವಿರಾರು ಕೋಟಿ ರುಪಾಯಿ ವಂಚಿಸಿರುವ ಮನ್ಸೂರ್ ಖಾನ್ ತನ್ನಿಬ್ಬರು ಪತ್ನಿಯರೊಂದಿಗೆ ದುಬೈಗೆ ಪರಾರಿಯಾಗಿದ್ದಾನೆಂದು ಶಂಕಿಸಲಾಗಿದೆ. ಆತನಿಗಾಗಿ ಬಲೆ ಬೀಸಿರುವ ಎಸ್ಐಟಿ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ.
ಸಾವಿರಾರು ಹೂಡಿಕೆದಾರರಿಗೆ ಹಣ ಹಿಂದುರಿಗಿಸದೆ ಮನ್ಸೂರ್ ಖಾನ್ ವಿದೇಶಕ್ಕೆ ಪರಾರಿಯಾಗಿದ್ದು, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ತನಿಖಾ ತಂಡ ತನಿಖೆಯನ್ನು ತೀವ್ರಗೊಳಿಸಿದ್ದು, ನಿನ್ನೆ ಖಾನ್‌ನ ಮೂರನೇ ಪತ್ನಿಯ ಮನೆ ಮೇಲೆ ದಾಳಿ ನಡೆಸಿ, ಚಿನ್ನಾಭರಣ ವಶಪಡಿಸಿಕೊಂಡಿತ್ತು. 40,600 ಮಂದಿ ಐಎಂಎಯಲ್ಲಿ ಹೂಡಿಕೆ ಮಾಡಿರುವುದಾಗಿ ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT