ಮೃತ ರೈತನ ಮನೆಗೆ ಸಿಎಂ ಕುಮಾರಸ್ವಾಮಿ ಭೇಟಿ 
ರಾಜ್ಯ

ಸಾಲಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ರೈತನ ಮನೆಗೆ ಸಿಎಂ ಭೇಟಿ: ಮಕ್ಕಳಿಗೆ ಸರ್ಕಾರಿ ಕೆಲಸದ ಭರವಸೆ

ಸಾಲಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆ.ಆರ್ ಪೇಟೆ ತಾಲೂಕಿನ ಅಘಲಯ ಗ್ರಾಮದ ರೈತ ಸುರೇಶ್‌ ನಿವಾಸಕ್ಕೆ ಮಂಗಳವಾರ ಮುಖ್ಯಮಂತ್ರಿ ...

ಮಂಡ್ಯ: ಸಾಲಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆ.ಆರ್ ಪೇಟೆ ತಾಲೂಕಿನ ಅಘಲಯ ಗ್ರಾಮದ ರೈತ ಸುರೇಶ್‌ ನಿವಾಸಕ್ಕೆ ಮಂಗಳವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿದರು, ಇದೇ ವೇಳೆ ಸಿಎಂ ಕುಮಾರಸ್ವಾಮಿ ಅವರು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. 
5 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್‌ಅನ್ನು ಕುಟುಂಬಸ್ಥರಿಗೆ ನೀಡಿದರು. ಬರಪೀಡಿತ ಸಂತೇಬಾಚಹಳ್ಳಿ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದ 50 ವರ್ಷದ ರೈತ ಸುರೇಶ್‌ ತಮ್ಮ ಜಮೀನಿನ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಸುಮಾರು ಎರಡೂವರೆ ಎಕರೆ ಜಮೀನು ಮತ್ತು ತೋಟ ಹೊಂದಿದ್ದ ಸುರೇಶ್‌ ತೋಟದ ಅಭಿವೃದ್ಧಿಗಾಗಿ ಅಘಲಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪತ್ನಿ ಜಯಶೀಲ ಹೆಸರಿನಲ್ಲಿ ಸಾಲ ಪಡೆದಿದ್ದರು. ಅಲ್ಲದೆ ಬೇಸಾಯಕ್ಕಾಗಿ ಖಾಸಗಿ ವ್ಯಕ್ತಿಗಳಿಂದ ಲಕ್ಷಾಂತರ ರೂ. ಸಾಲ ಮಾಡಿದ್ದರೆನ್ನ ಲಾಗಿದೆ. ಮಳೆ ಇಲ್ಲದೆ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿರಲಿಲ್ಲ. ಗ್ರಾಮದ ಕೆರೆ ತುಂಬಿರಲಿಲ್ಲ ಕೊಳವೆ ಬಾವಿಗಳು ಬತ್ತಿ ಹೋಗಿವೆ. ಇದರಿಂದ ತೋಟದಲ್ಲಿನ ತೆಂಗು, ಅಡಕೆ ಮರಗಳು ಒಣಗುತ್ತಿದ್ದವು. ಇದನ್ನು ನೋಡಲಾಗದೇ ತನ್ನಮೊಬೈಲ್‌ನಲ್ಲಿ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT