ಚೀರಮ್ಮ 
ರಾಜ್ಯ

ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆ ಬಹಿರಂಗಪಡಿಸಿದ್ದ ಶತಾಯುಷಿ ಚೀರಮ್ಮ ವಿಧಿವಶ

ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಗಳ ಬಗ್ಗೆ ಸುಳಿವು ನೀಡಿದ್ದ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಜಯಪುರ ಸಮೀಪದ ನಕ್ಸಲ್‌ ಪೀಡಿತ ಪ್ರದೇಶ .,.

ಬೆಂಗಳೂರು: ಕರ್ನಾಟಕದಲ್ಲಿ  ನಕ್ಸಲ್ ಚಟುವಟಿಕೆಗಳ ಬಗ್ಗೆ ಸುಳಿವು ನೀಡಿದ್ದ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಜಯಪುರ ಸಮೀಪದ ನಕ್ಸಲ್‌ ಪೀಡಿತ ಪ್ರದೇಶ ಮೆಣಸಿನಹಾಡ್ಯದ ಜೇಡಿಹಟ್ಟಿಯ ಶತಾಯುಷಿ ಚೀರಮ್ಮ(100) ಸೋಮವಾರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಸುಮಾರು 22 ವರ್ಷಗಳ ಹಿಂದೆ ಮನೆಯ ಸಮೀಪ ಆಕಸ್ಮಿಕವಾಗಿ ಹಾರಿದ ಗುಂಡು ಚೀರಮ್ಮ ಅವರ ಕಾಲಿಗೆ ತಗುಲಿದ ಹಿನ್ನೆಲೆಯಲ್ಲಿ ಮೆಣಸಿನಹಾಡ್ಯದಲ್ಲಿ ರಹಸ್ಯವಾಗಿ ನಡೆಯುತ್ತಿದ್ದ ನಕ್ಸಲ್‌ ಚಟುವಟಿಕೆ, ತರಬೇತಿ ವಿಚಾರಗಳು ಬೆಳಕಿಗೆ ಬಂದಿದ್ದವು. 
ಈ ಮೂಲಕ ಜಿಲ್ಲೆಯ ಮೊದಲ ನಕ್ಸಲ್‌ ಪ್ರಕರಣ ಜಯಪುರ ಠಾಣೆಯಲ್ಲಿ ದಾಖಲಾಗಿದ್ದು ಇದೀಗ ಇತಿಹಾಸ. 2002 ರ ನವೆಂಬರ್ 6 ರಂದು ಚೀರಮ್ಮ ಕಾಡಿನಲ್ಲಿ ಮರಗಳ ತುಂಡುಗಳನ್ನು ತರಲು ಹೋದಾಗ ಆಕೆಯ ಕಾಲು ಗಾಯವಾಗಿತ್ತು, ಏನಾಗಿದೆ ಎಂದು ಆಕೆಗೆ ತಿಳಿದಿರಲಿಲ್ಲ, ವೈದ್ಯರ ಬಳಿ ಹೋದಾಗ ತಿಳಿಯಿತು ಕಾಲಿಗೆ ಹೊಕ್ಕಿರುವುದು ಬುಲೆಟ್ ಎಂದು.
ನಂತರ ಈ ಸಂಬಂಧ ತನಿಖೆ ನಡೆಸಿದಾಗ ಕೊಪ್ಪದ ಮೆಣಸಿನಹಾಡ್ಯದಲ್ಲಿ  ನಕ್ಸಲ್ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಬೆಳಕಿಗೆ ಬಂತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2003 ರ ಆಗಸ್ಟ್ 3 ರಂದು ಆಕೆಯ ಮನೆಯ ಸಮೀಪ ಅಂದರೆ ಕುದುರೆಮುಖದ ಸಿನ್ಸಾಗರ ಗ್ರಾಮದ ರಾಮಚಂದ್ರ ಗೌಡ್ಲವಿನ,ಮನೆಯ ಸಮೀಪ ನಕ್ಸಲರು ಕಾಣಿಸಿಕೊಂಡಿದ್ದರು. ಇದು ರಾಜ್ಯದಲ್ಲಿ ಮೊದಲ ಬಾರಿಗೆ ಪೊಲೀಸರಿಂದ ನಡೆದ ನಕ್ಸಲ್ ಎನ್ ಕೌಂಟರ್ ಆಗಿತ್ತು. 
ಅದಾದ ನಂತರ ಹಲವು ಕೂಂಬಿಂಗ್ ಕಾರ್ಯಾಚರಣೆಗಳು ನಡೆದವು, ಸದ್ಯ ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಗಳು ಬಹತೇಕ ಸ್ಥಗಿತಗೊಂಡಿವೆ,  ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಹಲವರು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಚೀರಮ್ಮ ಅವರು ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಹೆಣ್ಣುಮಗಳನ್ನು ಅಗಲಿದ್ದಾರೆ. ಮಂಗಳವಾರ ಅವರ ಅಂತ್ಯಕ್ರಿಯೆ ನೆರವೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT