ಮುಹಮ್ಮದ್ ಮನ್ಸೂರ್ ಖಾನ್ 
ರಾಜ್ಯ

ಮನ್ಸೂರ್ ಖಾನ್ ಕಚೇರಿ, 3ನೇ ಪತ್ನಿ ಮನೆ ಮೇಲೆ ಎಸ್ಐಟಿ ದಾಳಿ, 33 ಕೋಟಿ ರೂ. ಬೆಲೆಯ ಚಿನ್ನಾಭರಣ ಜಪ್ತಿ

ಸಾವಿರಾರು ಜನರ ಷೇರು ಸಂಗ್ರಹಿಸಿ ಹೂಡಿಕೆದಾರರ ಹಣವನ್ನು ಹಿಂದಿರುಗಿಸದೇ ಪರಾರಿಯಾಗಿರುವ ಐಎಂಎ ಜ್ಯುವೆಲ್ಸ್ ಮಾಲೀಕ ಮುಹಮ್ಮದ್...

ಬೆಂಗಳೂರು: ಸಾವಿರಾರು ಜನರ ಷೇರು ಸಂಗ್ರಹಿಸಿ ಹೂಡಿಕೆದಾರರ ಹಣವನ್ನು ಹಿಂದಿರುಗಿಸದೇ ಪರಾರಿಯಾಗಿರುವ ಐಎಂಎ ಜ್ಯುವೆಲ್ಸ್ ಮಾಲೀಕ ಮುಹಮ್ಮದ್ ಮನ್ಸೂರ್ ಖಾನ್ ಅವರ ನಿವಾಸ ಹಾಗೂ ಅವರ ಮೂರನೇ ಪತ್ನಿಯ ನಿವಾಸದ ಮೇಲೆ ವಿಶೇಷ ತನಿಖಾ ತಂಡ(ಎಸ್ಐಟಿ) ದಾಳಿ ನಡೆಸಿದ್ದು, 33 ಕೋಟಿ ರೂ.ಬೆಲೆಯ ಚಿನ್ನಾಭರಣ ಹಾಗೂ ದಾಖಲಾತಿಗಳನ್ನು ವಶಪಡಿಸಿಕೊಂಡಿದೆ.
ಎಸ್ಐಟಿ ತಂಡ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಮುಹಮ್ಮದ್ ಮನ್ಸೂರ್ ಖಾನ್ ಅವರ ಜಯನಗರದ 11ನೇ ಮುಖ್ಯ ರಸ್ತೆಯಲ್ಲಿರುವ ಐಎಂಎ ಜ್ಯೂವೆಲರ್ಸ್ ಕಚೇರಿಯ ಕಟ್ಟಡದ ಮೇಲೆ ದಾಳಿ ನಡೆಸಿ 13 ಕೋಟಿ ರೂ. ಮೌಲ್ಯದ 43 ಕೆ.ಜಿ. ಚಿನ್ನಾಭರಣ, 17.6 ಕೋಟಿ ರೂ ಮೌಲ್ಯದ 5,864 ಕ್ಯಾರೆಟ್ ಡೈಮಂಡ್ ಹಾಗೂ 1.5 ಕೋಟಿ ಮೌಲ್ಯದ 520 ಕೆ.ಜಿ ಬೆಳ್ಳಿ ಮತ್ತು 1.5 ಕೋಟಿ ರೂ ಮೌಲ್ಯದ ಸೈಲ್ಟರ್ ಡೈಮಂಡ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಎಸ್ಐಟಿಯ ಮತ್ತೊಂದು ತಂಡವು, ಆರೋಪಿ ಮುಹಮ್ಮದ್ ಮನ್ಸೂರ್ ಖಾನ್ ಅವರ 3ನೇ ವಿಚ್ಛೇದಿತ ಪತ್ನಿ ತಬಸ್ಸಮ್ ಭಾನು ಅವರ ಶಿವಾಜಿನಗರದ ಗುಲ್ಷನ್ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿ 39.5 ಲಕ್ಷ ರೂ ಮೌಲ್ಯದ 1,503.7 ಗ್ರಾಂ ಚಿನ್ನಾಭರಣ, 1.5 ಕೆ.ಜಿ ಬೆಳ್ಳಿ ಹಾಗೂ 2.69 ಲಕ್ಷ ನಗದು  ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 40 ಲಕ್ಷ ಎಂದು ಅಂದಾಜಿಸಲಾಗಿದೆ.
ಅಲ್ಲದೇ, ತಿಲಕ್ ನಗರದ ಎಸ್ಆರ್ ಕೆ ಗಾರ್ಡನ್ ನಲ್ಲಿ ಹೊಂದಿರುವ 1.20 ಕೋಟಿ ಮೌಲ್ಯದ ಅಪಾರ್ಟ್ ಮೆಂಟ್ ದಾಖಲಾತಿಗಳು ಹಾಗೂ ಮುಹಮ್ಮದ್ ಮನ್ಸೂರ್ ಖಾನ್ ಗೆ ಸೇರಿದವು ಎನ್ನಲಾದ ವಾಣಿಜ್ಯ ಕಟ್ಟಡಗಳು,  ಜಮೀನುಗಳು, ಸ್ಕೂಲ್ ಪ್ರಾಪರ್ಟಿ, ಅಪಾರ್ಟ್ ಮೆಂಟ್  ಮುಂತಾದವು ಸೇರಿದಂತೆ ಒಟ್ಟು 26  ಸ್ಥಿರಾಸ್ತಿಗಳನ್ನು ಈವರೆಗೂ ಎಸ್ಐಟಿ ತಂಡ ಗುರುತಿಸಿದ್ದು, ತನಿಖೆ ಚುರುಕುಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT