ವಿಧಾನಸೌಧ 
ರಾಜ್ಯ

ಪೊಲೀಸರಿಗೆ 1000 ರೂ. ಕಷ್ಟ ಪರಿಹಾರ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರ ಪೊಲೀಸರಿಗೆ ಕಷ್ಟ ಪರಿಹಾರ ಭತ್ಯೆ ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸರಿಗೆ ಕಷ್ಟ ಪರಿಹಾರ ಭತ್ಯೆ ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ.
2019-20ನೇ ಆಯವ್ಯಯದಲ್ಲಿ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದರು. ಬಜೆಟ್ ಆಶ್ವಾಸನೆಯಂತೆ ಆದೇಶ ಹೊರಡಿಸಲಾಗಿದ್ದು, ಜುಲೈ1ರಿಂದ ಅನ್ವಯವಾಗುವಂತೆ ಭತ್ಯೆ ಹೆಚ್ಚಳಕ್ಕೆ ಸರ್ಕಾರ ಅನುಮೋದನೆ ನೀಡಿದೆ.
ಪೊಲೀಸರ ವೇತನ ಹೆಚ್ಚಳ ಸೇರಿದಂತೆ ಅನೇಕ ಹಕ್ಕೊತ್ತಾಯಗಳ ಮಂಡಿಸಿ 2016ರ ಜೂನ್ ನಲ್ಲಿ ಪೊಲೀಸರು ಪ್ರತಿಭಟನೆ ಎಚ್ಚರಿಕೆ ನೀಡಿದ್ದರು. ಈ ಹೋರಾಟಕ್ಕೆ ಬೆದರಿದ ಸರ್ಕಾರ ಔರಾದ್ಕರ್ ವರದಿ ಜಾರಿ ಮಾಡುವುದರ ಬದಲಾಗಿ ಕಷ್ಟ ಪರಿಹಾರ ಭತ್ಯೆ 1000ರೂ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಹಾಲಿ ಮೈತ್ರಿ ಸರ್ಕಾರ ಕಷ್ಟ ಪರಿಹಾರ ಭತ್ಯೆಗೆ ಹೆಚ್ಚುವರಿ 1000 ರೂ ನೀಡುವ ಮೂಲಕ ಪೊಲೀಸರ ಮನ ಗೆಲ್ಲುವ ಕೆಲಸ ಮಾಡಿದೆ. ಆದರೆ ಇದಕ್ಕೆ ಪೊಲಿಸ್ ಸಿಬ್ಬಂದಿ ಸಮಾಧಾನ ಹೊಂದಿಲ್ಲ ಎನ್ನಲಾಗಿದೆ.  ಪೊಲೀಸ್ ಸಿಬ್ಬಂದಿಯ ಏಕೈಕ ಒತ್ತಾಯವಿರುವುದು ವೇತನ ಪರಿಷ್ಕರಣೆ  ಕುರಿತ ಔರಾದ್ಕರ್ ವರದಿ ಜಾರಿಗೊಳಿಸುವುದಾಗಿದೆ. ಆದರೂ ರಾಜ್ಯ ಸರ್ಕಾರ ಪೊಲೀಸ್ ಸಿಬ್ಬಂದಿ ಭತ್ಯೆ ಹೆಚ್ಚಳ ಮಾಡುವ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT