ಮಂಗಳೂರು: ದಂಪತಿಗಳು ಅನುಮಾನಾಸ್ಪದ ಸಾವು, ಕೊಳೆತ ಸ್ಥಿತಿಯಲ್ಲಿ ಸಿಕ್ಕ ಮೃತದೇಹಗಳು 
ರಾಜ್ಯ

ಮಂಗಳೂರು: ದಂಪತಿಗಳು ಅನುಮಾನಾಸ್ಪದ ಸಾವು, ಕೊಳೆತ ಸ್ಥಿತಿಯಲ್ಲಿ ಸಿಕ್ಕ ಮೃತದೇಹಗಳು

ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಮೃತದೇಹವು ಪತ್ತೆಯಾಗಿರುವ ಘಟನೆ ಮಂಗಳೂರಿನ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ನಡೆದಿದೆ.

ಮಂಗಳೂರು: ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಮೃತದೇಹವು ಪತ್ತೆಯಾಗಿರುವ ಘಟನೆ ಮಂಗಳೂರಿನ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ನಡೆದಿದೆ.
ಬುಧವಾರ ಬೆಳಿಗ್ಗೆ ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ (78) ಹಾಗೂ ವಿಮಲ (65) ಮೃತದೇಹಗಳು ಪತ್ತೆಯಾಗಿದ್ದು ದಂಪತಿಗಳ ಸಾವಿಗೆ ನಿಖರ ಕಾರಣ ಪತ್ತೆಯಾಗಿಲ್ಲ.
ಮೃತ ದಂಪತಿಗಳಿಗೆ ಮೂವರು ಮಕ್ಕಳಿದ್ದು ಎಲ್ಲರೂ ಮದುವೆಯಾಗಿದ್ದಾರೆ.ಅಲ್ಲದೆ ಬೇರೆ ಮನೆ ಮಾಡಿ ವಾಸವಿದ್ದಾರೆ. ಬುಧವಾರ ಮಧ್ಯಾಹ್ನ ಮೃತ ಪದ್ಮನಾಭ ಅವರ ಅಳಿಯ ಉಮಾರಾವ್ ಮನೆಗೆ ಆಗಮಿಸಿದ್ದಾರೆ.ಆಗ ಬಾಗಿಲು ಬಡಿದರೂ ಯಾರೂ ಬಾಗಿಲು ತೆರೆದಿರಲಿಲ್ಲ. ಮನೆಯೊಳಗಿನಿಂದ ದುರ್ವಾಸನೆ, ನೊಣಗಳ ಹಾರಾಟ ಕಂಡ ಅವರು ಅನುಮಾನಗೊಂಡು ಸ್ಥಳೀಯರ ನೆರವಿನಿಂದ ಪೋಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ಬಾಗಿಲು ತೆರೆದು ಒಳಪ್ರವೇಶಿಸಿದ್ದ ಪೋಲೀಸರಿಗೆ ಅಡುಗೆ ಮನೆಯಲ್ಲಿ ದಂಪತಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಂಡಿದೆ.ಉಳ್ಳಾಲ ಇನ್ಸ್ ಪೆಕ್ಟರ್ ಗೋಪಿಕೃಷ್ಣ, ಪಿಎಸ್ ಐ ಗುರುವಪ್ಪ ಕಾಂತಿ ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT