ಡಿ ಕೆ ಚೌಟ(ಸಂಗ್ರಹ ಚಿತ್ರ) 
ರಾಜ್ಯ

ಹಿರಿಯ ರಂಗಕರ್ಮಿ ಡಿ ಕೆ ಚೌಟ ನಿಧನ

ಹಿರಿಯ ರಂಗಕರ್ಮಿ, ರಂಗ ನಿರಂತರ ಕಾರ್ಯಾಧ್ಯಕ್ಷ ಡಿ ಕೆ ಚೌಟ ಬುಧವಾರ ಬೆಂಗಳೂರಿನ ಜಯದೇವ ...

ಬೆಂಗಳೂರು: ಹಿರಿಯ ರಂಗಕರ್ಮಿ, ರಂಗ ನಿರಂತರ ಕಾರ್ಯಾಧ್ಯಕ್ಷ ಡಿ ಕೆ ಚೌಟ ಬುಧವಾರ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 
ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಆನಂದ ಕೃಷ್ಣ ಎಂಬ ಕಾವ್ಯನಾಮದಲ್ಲಿ ಕೃತಿಗಳನ್ನು ರಚಿಸಿದ್ದ ಡಿ.ಕೆ. ಚೌಟ ತುಳು ಸಾಹಿತ್ಯ ಆಕಾಡೆಮಿಯಿಂದ ಪ್ರಶಸ್ತಿಯನ್ನೂ ಪಡೆದಿದ್ದರು. ಚಿತ್ರಕಲಾ ಪರಿಷತ್‌ ಅಧ್ಯಕ್ಷರಾಗಿಯೂ ಡಿ.ಕೆ. ಚೌಟ ಕಾರ್ಯ ನಿರ್ವಹಿಸಿದ್ದರು.
ಜೂನ್ 1, 1938ರಲ್ಲಿ ಮಂಜೇಶ್ವರ ಸಮೀಪದ ಮೀಯಪ್ಪದವಿನ ಕೇರಳದ ಬಂಟ ಮನೆತನದಲ್ಲಿ ಜನಿಸಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದು, ಸಂದೀಪ್‌ ಚೌಟ ಸಂಗೀತಗಾರರಾಗಿದ್ದರೆ, ಪ್ರಜ್ಞಾ ಚೌಟ ಜನಾಂಗಶಾಸ್ತ್ರಜ್ಞೆಯಾಗಿದ್ದಾರೆ.
ಡಿ.ಕೆ. ಚೌಟ ಅವರ ನಿಧನಕ್ಕೆ ಸಚಿವ ಕೃಷ್ಣ ಬೈರೇಗೌಡ ಸಂತಾಪ ಸೂಚಿಸಿದ್ದು, ಡಿ.ಕೆ. ಚೌಟ ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ದೊಡ್ಡ ಹೆಸರು. ಅವರು ಚಿತ್ರಕಲಾ ಪರಿಷತ್ತಿನ ಕಾರ್ಯದರ್ಶಿಯಾಗಿ, ರಂಗ ನಿರಂತರದ ಪೋಷಕರಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವ ಮೂಲಕ ಆ ಸಂಸ್ಥೆಗಳ ಬೆಳವಣಿಗೆಗೆ ಕಾರಣರಾದರು. ಚಿತ್ರಕಲಾ ಪರಿಷತ್ತಿನ ಬೆಳವಣಿಗೆಯಲ್ಲಿ ಡಿ.ಕೆ. ಚೌಟ ಅವರ ಪಾತ್ರ ಬಹಳ ದೊಡ್ಡದು. ಚಿತ್ರಸಂತೆ ಮೂಲಕ ಅವರು ರಾಷ್ಟ್ರಮಟ್ಟದಲ್ಲಿ ಚಿತ್ರಕಲಾ ಪರಿಷತ್ತು ಖ್ಯಾತಿ ಪಡೆಯಲು ಕಾರಣರಾದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು