ಬೆಂಗಳೂರು: ರಾಜಕಾರಣಿಗಳೂ ಚುನಾವಣೆ ವೇಳೆ ಜನರಿಗೆ ನೀಡಿದ್ದ ಭರವಸೆಗಳನ್ನು ಒಮ್ಮೆ ಮತದಾನ ಮುಗಿದ ನಂತರ ಜಾರಿಗೆ ತರಲು ಮರೆಯುವುದು ಸಾಮಾನ್ಯ್. ಅದಕ್ಕೆ ಬಿಜೆಪಿ ನಾಯಕ ವಿ. ಸೋಮಣ್ಣ ಸಹ ಹೊರತಲ್ಲ. ಆದರೆ ಈಗ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ನಿಡಿದ್ದ ಭರವಸೆಯನ್ನೇ ಮರೆತು ಪೇಚಿಗೆ ಸಿಕ್ಕಿದ್ದಾರೆ. ಒಂದೊಮ್ಮೆ ತುಮಕೂರಿನಲ್ಲಿ ದೇವೇಗೌಡರು ಸೋತರೆ ಆಗ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ತುಮಕೂರು ನಗರ ಕಾರ್ಪೊರೇಶನ್ನ ಬಿಜೆಪಿ ಕಾರ್ಪೊರೇಟರ್ಗಳಿಗೆ ವಾರಾಣಾಸಿಗೆ ಪ್ರವಾಸ ಕರೆದೊಯ್ಯುವುದಾಗಿ ಹೇಳಿ ಈಗ ತಾವು ನೀಡಿದ್ದ ಭರವಸೆ ಈಡೇರುಸುವುದನ್ನೇ ಮರೆತಿದ್ದಾರೆ.
ಪಕ್ಷದ 12 ಕಾರ್ಪೋರೇಟರ್ಗಳು ಮಾತ್ರವಲ್ಲದೆ ಅವರ ಕೆಲವು ಸ್ನೇಹಿತರೂ ಸಹ - ಜಿ ಎಸ್ ಬಸವರಾಜು ಅವರ ಗೆಲುವುಗಾಗಿ ಹಗಲಿರುಳು ಶ್ರಮಿಸಿದ್ದಾರೆ.ಹಾಗಾಗಿ ದೇವೇಗೌಡರು ಸೋಲೊಪ್ಪಬೇಕಾಗಿ ಬಂದಿದೆ. ಮತ್ತು ಈಗ ಅವರು ಸೋಮಣ್ಣ ಅವರಿಗೆ ಅವರೇ ಕೊಟ್ಟಿದ್ದ ಕಾಶಿ ಪ್ರವಾಸದ ಭರವಸೆಯನ್ನು ನೆನಪಿಸಿಕೊಡುತ್ತಿದ್ದಾರೆ. ತುಮಕೂರು ನಗರದಲ್ಲಿ ಬಸವರಾಜು ಅವರಿಗೆ 10,000 ಕ್ಕೂ ಹೆಚ್ಚು ಮತಗಳ ಮುನ್ನಡೆ ದೊರಕಿತ್ತು.
ಪಿಎಂ ನರೇಂದ್ರ ಮೋದಿ ಹೊರತುಪಡಿಸಿ ಬೇರೆ ಯಾರೂ ಪ್ರತಿನಿಧಿಸದ ವಾರಣಾಸಿಗೆ ಪ್ರವಾಸ ಕೈಗೊಳ್ಳಬೇಕು ಎಂದು ಕಾರ್ಪೊರೇಟರ್ಗಳು ಮತ್ತು ಬಿಜೆಪಿ ಕಾರ್ಯಕರ್ತರು ಹುರುಪಿನಲ್ಲಿದ್ದಾರೆ. "ನಾವು ಕಾತುರರಾಗಿದ್ದೇವೆ. ಈ ಬಗ್ಗೆ ವಿ. ಸೋಮಣ್ಣನವರಿಗೆ ಜ್ಞಾಪಕ ಮಾಡಿಕೊಡುತ್ತಿದ್ದೇವೆ" ಅವರಲ್ಲೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos