ಕಾರವಾರದ ಕೊಡಿಬಾಗ್ ನಲ್ಲಿರುವ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆಯ ಗೋಡೆ 
ರಾಜ್ಯ

ಮಳೆಗಾಲ ಬಂತು: ಉತ್ತರ ಕನ್ನಡ ಜಿಲ್ಲೆಯ ಮಣ್ಣಿನ ಗೋಡೆಯ ಶಾಲೆಗಳ ಶಿಕ್ಷಕರಿಗೆ ಶುರುವಾಯ್ತು ಆತಂಕ

ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆ ಆರಂಭಿಸಿರುವ ರಾಜ್ಯ ಸರ್ಕಾರ ...

ಕಾರವಾರ: ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆ ಆರಂಭಿಸಿರುವ ರಾಜ್ಯ ಸರ್ಕಾರ ಶಾಲೆಗಳ ಕಟ್ಟಡದ ಗುಣಮಟ್ಟವನ್ನು ಮೊದಲು ಕಾಪಾಡಿಕೊಳ್ಳಬೇಕು ಎಂಬ ಮಾತು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಹಲವು ಸರ್ಕಾರಿ ಶಾಲೆಗಳಲ್ಲಿ ಮಣ್ಣಿನ ಗೋಡೆಗಳಿದ್ದು ಮಳೆಗಾಲ ಬಂದರೆ ಇಲ್ಲಿನ ಶಿಕ್ಷಕರಿಗೆ ಆತಂಕ ಆರಂಭವಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಚಿವರುಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕೂಡ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಮಳೆಗಾಲದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರಿಗೆ ಆತಂಕವಾಗುತ್ತಿದೆ. ಶಿಕ್ಷಕರಿಗೆ ಸಹ ಶಾಲೆಯ ಕಟ್ಟಡದೊಳಗೆ ಮಕ್ಕಳನ್ನು ಕುಳ್ಳಿರಿಸಿ ಪಾಠ ಮಾಡಲು ಭಯವಾಗುತ್ತದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮಳೆಗಾಲದಲ್ಲಿ ಭಾರೀ ಗಾಳಿ, ಮಳೆಯಾಗುತ್ತದೆ. ಪ್ರತಿ ಮುಂಗಾರು ಋತುವಿನಲ್ಲಿ ಮನೆಗಳ ಮೇಲೆ ಮರ ಬೀಳುವುದು, ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗುವುದು ಸಾಮಾನ್ಯ. ಹಲವು ಕಡೆಗಳಲ್ಲಿ ನದಿ, ಕೆರೆ ತುಂಬಿ ಹರಿದು ಮನೆ, ಕಟ್ಟಡಗಳು ಮುಳುಗಿಹೋಗುವ ಪರಿಸ್ಥಿತಿ ಕೂಡ ಇದೆ.
ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಕೂಡ ಜಿಲ್ಲೆಯ ಹಲವು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಇನ್ನೂ ಮಣ್ಣಿನ ಗೋಡೆಗಳಿವೆ. ಮಣ್ಣಿನ ಗೋಡೆಗಳು ಹರಕು ಮುರುಕಾಗಿವೆ. ಕೆಲವು ಶಾಲೆಗಳು ಹಲವು ದಶಕಗಳ ಹಿಂದೆಯೇ ನಿರ್ಮಾಣವಾಗಿರುವಂತವು. 
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರವಾರ ಮತ್ತು ಶಿರಸಿ ಎರಡು ಶೈಕ್ಷಣಿಕ ಜಿಲ್ಲೆಗಳಿವೆ. ಕಾರವಾರ ಜಿಲ್ಲೆಯಲ್ಲಿ 181 ಶಾಲೆಗಳು ಮತ್ತು ಶಿರಸಿಯಲ್ಲಿ 137 ಶಾಲೆಗಳು ಮಣ್ಣಿನ ಗೋಡೆಯಿಂದ ನಿರ್ಮಾಣಗೊಂಡವುಗಳಾಗಿವೆ. ಒಟ್ಟು ಈ ಜಿಲ್ಲೆಗಳಲ್ಲಿ 318 ಶಾಲೆಗಳಿದ್ದು ಇವುಗಳ ನಿರ್ಮಾಣ ಸುರಕ್ಷತೆ ಬಗ್ಗೆ ಸರ್ಕಾರ ಗಮನ ಹರಿಸಬೇಕಾದ ಅಗತ್ಯವಿದೆ.
ಈ ಜಿಲ್ಲೆಗಳಲ್ಲಿ 12,720 ವಿದ್ಯಾರ್ಥಿಗಳು ಮತ್ತು 424 ಶಿಕ್ಷಕರಿದ್ದಾರೆ. ಶಿಕ್ಷಕರಿಗೆ ಮತ್ತು ಶಾಲೆಗೆ ಮಕ್ಕಳನ್ನು ಕಳುಹಿಸುತ್ತಿರುವ ಪೋಷಕರಿಗೆ ಆತಂಕ ಎದುರಾಗಿದೆ. ನಮ್ಮ ಶಾಲೆ ಸುಮಾರು 30 ವರ್ಷಗಳ ಹಿಂದೆ ನಿರ್ಮಾಣವಾದದ್ದು. 
ಹೊರಗಿನಿಂದ ನೋಡುವಾಗ ಏನೂ ಅನಿಸುವುದಿಲ್ಲ. ಒಂದು ಭಾರೀ ಮಳೆ ಬಂದು ಗೋಡೆ ಒದ್ದೆಯಾದಾಗ ನಮಗೆ ಭಯವಾಗುತ್ತದೆ. ಏನಾದರೂ ಹೆಚ್ಚುಕಮ್ಮಿಯಾದರೆ ಮಕ್ಕಳ ಪೋಷಕರು ಬೈಯುವುದು ಶಿಕ್ಷಕರನ್ನು. ಮಣ್ಣಿನ ಗೋಡೆಯ ಬಗ್ಗೆ ನಾವು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಹೇಳಿದ್ದೇವೆ, ಆದರೆ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುತ್ತಾರೆ ಶಿಕ್ಷಕರೊಬ್ಬರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT