ಡಿವಿ ಸದಾನಂದಗೌಡ ಹಾಗೂ ಸುಮಲತಾ 
ರಾಜ್ಯ

ಮಂಡ್ಯ ನಾಲೆಗಳಿಗೆ ಕೆಆರ್ ಎಸ್ ನಿಂದ 2 ಟಿಎಂಸಿ ನೀರು ಬಿಡುಗಡೆಗೆ ಆಗ್ರಹಿಸಿ ಸದಾನಂದಗೌಡ ಪತ್ರ

ಮಂಡ್ಯ ರೈತರ ಬೆಳೆದು ನಿಂತ ಬೆಳೆಗಳನ್ನು ಉಳಿಸಿಕೊಳ್ಳಲು ನಾಲೆಗಳಿಗೆ ತಕ್ಷಣ 2 ಟಿಎಂಸಿ ನೀರನ್ನು ಕೆಆರ್ ಎಸ್ ಅಣೆಕಟ್ಟೆಯಿಂದ ಮಂಡ್ಯ ಜಿಲ್ಲೆಯ ನಾಲೆಗಳಿಗೆ ಹರಿಸುವಂತೆ ಕೇಂದ್ರ ಸಚಿವ ಸದಾನಂದಗೌಡ ಅವರು ಕಾವೇರಿ ಜಲ ನಿರ್ವಹಣಾ ಮಂಡಳಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಮಂಡ್ಯ ರೈತರ ಬೆಳೆದು ನಿಂತ ಬೆಳೆಗಳನ್ನು ಉಳಿಸಿಕೊಳ್ಳಲು ನಾಲೆಗಳಿಗೆ ತಕ್ಷಣ 2 ಟಿಎಂಸಿ ನೀರನ್ನು ಕೆಆರ್ ಎಸ್ ಅಣೆಕಟ್ಟೆಯಿಂದ ಮಂಡ್ಯ ಜಿಲ್ಲೆಯ ನಾಲೆಗಳಿಗೆ ಹರಿಸುವಂತೆ ಕೇಂದ್ರ ಸಚಿವ ಸದಾನಂದಗೌಡ ಅವರು ಕಾವೇರಿ ಜಲ ನಿರ್ವಹಣಾ ಮಂಡಳಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಮಂಡ್ಯ ಜಿಲ್ಲೆಯ ರೈತರು ನೀರಿಲ್ಲದೆ ಸಂಕಷ್ಟದಲ್ಲಿದ್ದು ಬೆಳೆದು ನಿಂತ ಬೆಳೆಯನ್ನು ಉಳಿಸಿಕ್ಕೊಳ್ಳಲು ನಾಲೆಗಳಿಗೆ ತಕ್ಷಣ 2 ಟಿಎಂಸಿ ನೀರನ್ನು ಕೆಆರ್ ಎಸ್ ಅಣೆಕಟ್ಟೆಯಿಂದ ಮಂಡ್ಯ ಜಿಲ್ಲೆಯ ನಾಲೆಗಳಿಗೆ ಹರಿಸುವಂತೆ ಕೇಂದ್ರ ಸಚಿವ ಸದಾನಂದಗೌಡ ಅವರು ಕಾವೇರಿ ಜಲ ನಿರ್ವಹಣಾ ಮಂಡಳಿ ಮಸೂದ್ ಹುಸೇನ್ ಹಾಗೂ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಕಾವತ್ ರವರಿಗೆ ಪತ್ರ ಬರೆದಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಸಚಿವ ಸದಾನಂದಗೌಡರನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಮಂಡ್ಯ ಜಿಲ್ಲೆಯ ರೈತರ ಸಂಕಷ್ಟ ಹಾಗೂ ಬೆಳೆಗಳ ಪರಿಸ್ಥಿತಿಯನ್ನು ವಿವರಿಸಿ ನೀರು ಬಿಡುಗಡೆಗೆ ಒತ್ತಾಯಿಸಿದ್ದಾರೆ.ಇದೇ ವೇಳೆ ಮಂಡ್ಯ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಸಿಎಸ್ ಪುಟ್ಟರಾಜು ಸಹ ಸದಾನಂದಗೌಡರಿಗೆ ದೂರವಾಣಿ ಕರೆ ಮಾಡಿ ನೀರು ಬಿಡುಗಡೆ ಒತ್ತಡ ಹೇರಿದ್ದಾರೆ. ಸುಮಲತಾ ಹಾಗೂ ಪುಟ್ಟರಾಜು ಮನವಿಯನ್ನು ಪುರಸ್ಕರಿಸಿದ ಕೇಂದ್ರ ಸಚಿವ ಡಿವಿ ಸದಾನಂದಗೌಡ ತಕ್ಷಣವೇ ಕೇಂದ್ರ ಜಲಶಕ್ತಿ ಸಚಿವ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT