ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪಬ್ ನ 3ನೇ ಮಹಡಿಯಿಂದ ಬಿದ್ದು ಜೋಡಿ ಸಾವು; ಮಾಲೀಕ, ಮ್ಯಾನೇಜರ್ ವಿರುದ್ಧ ದೂರು ದಾಖಲು!

ಚರ್ಚ್ ಸ್ಟ್ರೀಟ್ ನಲ್ಲಿರುವ ಪಬ್ ನ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಮತ್ತು ಯುವತಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಬೆಂಗಳೂರು: ಚರ್ಚ್ ಸ್ಟ್ರೀಟ್ ನಲ್ಲಿರುವ ಪಬ್ ನ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಮತ್ತು ಯುವತಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪವನ್ ಅತ್ತಾವರ್ ಹಾಗೂ ವೇದಾ ಆರ್ ಮೃತ ಜೋಡಿ. ಶುಕ್ರವಾರ ರಾತ್ರಿ ಸುಮಾರು 11:30ಕ್ಕೆ ಪವನ್ ಅತ್ತಾವರ್ ಹಾಗೂ ವೇದಾ ಆರ್ ಎಂಬವರು ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿರುವ ಆಶ್ ಬೀರ್ ಪಬ್ ಗೆ ಬಂದಿದ್ದರು. ಪಬ್ ನ ಕೊನೆಯ ರೂಫ್ ಫ್ಲೋರ್‌ನಲ್ಲಿ ಕುಳಿತು ಪಾರ್ಟಿ ಮಾಡಿದ್ದ ಪವನ್ ಹಾಗೂ ವೇದಾ ರೂಫಿನ ತುದಿಯಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಮೂರನೇ ಮಹಡಿಯಿಂದ ನೆಲಕ್ಕೆ ಬಿದ್ದಿದ್ದಾರೆ. ಇಬ್ಬರು ಪರಸ್ಪರ ಕೈ ಹಿಡಿದುಕೊಂಡೇ ಕೆಳಗೆ ಬಿದ್ದಿದ್ದಾರೆ.
ಘಟನೆಯಲ್ಲಿ ಪವನ್ ಹಾಗೂ ವೇದಾ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು. ಇದೇ ವೇಳೆ ನೂತನ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರು ಚರ್ಚ್ ಸ್ಟ್ರೀಟ್ ರೋಡಲ್ಲಿ ನೈಟ್ ರೌಂಡ್ಸ್ ನಲ್ಲಿದ್ದರು. ಇದೇ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 
ಕೂಡಲೇ ಸ್ಥಳಕ್ಕೆ ಹೋಗಿ ನೋಡಿದಾಗ ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿತ್ತು. ಇಬ್ಬರನ್ನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಬ್ಬರು ಅಷ್ಟರಲ್ಲಿ ಮೃತಪಟ್ಟಿದ್ದರು. ಪವನ್ ಅತ್ತಾವರ್ ರಾಷ್ಟ್ರೀಯ ಪತ್ರಿಕೆಯಲ್ಲಿ ಹಾಗೂ ವೇದಾ ಆರ್ ಐಬಿಎಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. 
ಈ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಬ್ ಮಾಲೀಕ ಹಾಗೂ ಮ್ಯಾನೇಜರ್ ವಿರುದ್ಧ ದೂರು ದಾಖಲಾಗಿದೆ, ಅಗತ್ಯವಾದ ಸುರಕ್ಷತಾ ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT