ಸಂಗ್ರಹ ಚಿತ್ರ 
ರಾಜ್ಯ

ಗ್ರಾಮ ವಾಸ್ತವ್ಯ ರದ್ದಾಗಿಲ್ಲ, ಭಾರೀ ಮಳೆಯ ಕಾರಣ ಮುಂದೂಡಲಾಗಿದೆ: ಸಿಎಂ ಕುಮಾರಸ್ವಾಮಿ

ಗ್ರಾಮವಾಸ್ತವ್ಯ ಕಾರ್ಯಕ್ರಮ ರದ್ದಾಗಿಲ್ಲ, ಮುಂದೂಡಲ್ಪಟ್ಟಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಯಾದಗಿರಿ: ಗ್ರಾಮವಾಸ್ತವ್ಯ ಕಾರ್ಯಕ್ರಮ ರದ್ದಾಗಿಲ್ಲ, ಮುಂದೂಡಲ್ಪಟ್ಟಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮಳೆ ಅಡ್ಡಿಯಾದ ಹಿನ್ನಲೆಯಲ್ಲಿ ಗ್ರಾಮ ವಾಸ್ತವ್ಯ ರದ್ದಾಗಿದೆ ಎಂದು ಹೇಳಲಾಗಿತ್ತು.  ಆದರೆ ಕಲಬುರ್ಗಿ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಆಫ್ಜಲಪುರ ತಾಲ್ಲೂಕಿನ ಹೆರೂರ (ಬಿ) ಗ್ರಾಮ ವಾಸ್ತವ್ಯವನ್ನು ಮುಂದೂಡಲಾಗಿದೆ. ಗ್ರಾಮ ವಾಸ್ತವ್ಯ ರದ್ದಾಗಿಲ್ಲ, ಮುಂದೂಡಲಾಗಿದೆ. ಜುಲೈ ಎರಡನೇ ವಾರದಲ್ಲಿ ಅಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಚಂಡರಕಿಯಲ್ಲಿ ಶನಿವಾರ ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಸ್ತವ್ಯ ಮುಂದೂಡಲಾಗಿದೆ ಎನ್ನುವುದಕ್ಕಿಂತ ಈ ಭಾಗದಲ್ಲಿ ಆಶಾದಾಯಕ ಮಳೆ ಬಂದಿದೆ. ಹೀಗಾಗಿ ವಾಸ್ತವ್ಯ ಮುಂದೂಡಲಾಗಿದೆ. ಈ ಭಾಗದ ಜನರು ಏನೆಲ್ಲ ನಿರೀಕ್ಷೆ ಇಟ್ಟುಕೊಂಡಿದ್ದರು. ಅವರ ಕ್ಷಮೆಯನ್ನು ಕೇಳುತ್ತೇನೆ. ಜುಲೈನಲ್ಲಿ 10 ದಿನಗಳ ವಿಧಾನಸಭೆ ಅಧಿವೇಶನ ನಡೆಸಬೇಕಾಗಿದೆ. ಅದರಿಂದ ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುವುದು. ಚಂಡರಕಿ ಗ್ರಾಮ ವಾಸ್ತವ್ಯದಲ್ಲಿ ಜನ ಸಾಮಾನ್ಯರ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಗಿದೆ. ಕೆಲ ಅರ್ಜಿಗಳನ್ನು ನ್ಯಾಯಾಲಯದಲ್ಲಿ ಮಾತ್ರ ಬಗೆಹರಿಸಬಹುದಾಗಿದೆ. ಹೀಗಾಗಿ ಆ ಪ್ರಕರಣಗಳನ್ನು ಇತ್ಯರ್ಥಪಡಿಸಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇನ್ನು ಕಲಬುರ್ಗಿ ತಾಲ್ಲೂಕಿನ ಹೇರೂರ ಗ್ರಾಮದಲ್ಲಿ ಸಿಎಂ ಜನತಾದರ್ಶನಕ್ಕೆ ಹಾಕಿದ್ದ ಪೆಂಡಾಲ್ ಕೂಡ ಮಳೆಗೆ ಹಾಳಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT