ಯಾದಗಿರಿ: ಗ್ರಾಮವಾಸ್ತವ್ಯ ಕಾರ್ಯಕ್ರಮ ರದ್ದಾಗಿಲ್ಲ, ಮುಂದೂಡಲ್ಪಟ್ಟಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮಳೆ ಅಡ್ಡಿಯಾದ ಹಿನ್ನಲೆಯಲ್ಲಿ ಗ್ರಾಮ ವಾಸ್ತವ್ಯ ರದ್ದಾಗಿದೆ ಎಂದು ಹೇಳಲಾಗಿತ್ತು. ಆದರೆ ಕಲಬುರ್ಗಿ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಆಫ್ಜಲಪುರ ತಾಲ್ಲೂಕಿನ ಹೆರೂರ (ಬಿ) ಗ್ರಾಮ ವಾಸ್ತವ್ಯವನ್ನು ಮುಂದೂಡಲಾಗಿದೆ. ಗ್ರಾಮ ವಾಸ್ತವ್ಯ ರದ್ದಾಗಿಲ್ಲ, ಮುಂದೂಡಲಾಗಿದೆ. ಜುಲೈ ಎರಡನೇ ವಾರದಲ್ಲಿ ಅಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಚಂಡರಕಿಯಲ್ಲಿ ಶನಿವಾರ ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಸ್ತವ್ಯ ಮುಂದೂಡಲಾಗಿದೆ ಎನ್ನುವುದಕ್ಕಿಂತ ಈ ಭಾಗದಲ್ಲಿ ಆಶಾದಾಯಕ ಮಳೆ ಬಂದಿದೆ. ಹೀಗಾಗಿ ವಾಸ್ತವ್ಯ ಮುಂದೂಡಲಾಗಿದೆ. ಈ ಭಾಗದ ಜನರು ಏನೆಲ್ಲ ನಿರೀಕ್ಷೆ ಇಟ್ಟುಕೊಂಡಿದ್ದರು. ಅವರ ಕ್ಷಮೆಯನ್ನು ಕೇಳುತ್ತೇನೆ. ಜುಲೈನಲ್ಲಿ 10 ದಿನಗಳ ವಿಧಾನಸಭೆ ಅಧಿವೇಶನ ನಡೆಸಬೇಕಾಗಿದೆ. ಅದರಿಂದ ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುವುದು. ಚಂಡರಕಿ ಗ್ರಾಮ ವಾಸ್ತವ್ಯದಲ್ಲಿ ಜನ ಸಾಮಾನ್ಯರ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಗಿದೆ. ಕೆಲ ಅರ್ಜಿಗಳನ್ನು ನ್ಯಾಯಾಲಯದಲ್ಲಿ ಮಾತ್ರ ಬಗೆಹರಿಸಬಹುದಾಗಿದೆ. ಹೀಗಾಗಿ ಆ ಪ್ರಕರಣಗಳನ್ನು ಇತ್ಯರ್ಥಪಡಿಸಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇನ್ನು ಕಲಬುರ್ಗಿ ತಾಲ್ಲೂಕಿನ ಹೇರೂರ ಗ್ರಾಮದಲ್ಲಿ ಸಿಎಂ ಜನತಾದರ್ಶನಕ್ಕೆ ಹಾಕಿದ್ದ ಪೆಂಡಾಲ್ ಕೂಡ ಮಳೆಗೆ ಹಾಳಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos