ರಾಜ್ಯ

ರಾಮನಗರ: ಮರಕ್ಕೆ ಕಾರು ಡಿಕ್ಕಿ, ಮದುವೆ ಮುಗಿಸಿ ಬರುತ್ತಿದ್ದ ಮೂವರ ದುರ್ಮರಣ

Shilpa D
ರಾಮನಗರ: ಚಾಲಕನ ಅಜಾಗರೂಕತೆಯಿಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಾಗಡಿ – ಕುಣಿಗಲ್ ರಸ್ತೆಯ ಹುಚ್ಚನುಮೆಗೌಡನ ಪಾಳ್ಯದ ಬಳಿ ನಡೆದಿದೆ.
ಶ್ರೀಪತಿಹಳ್ಳಿಯ ನರಸಮ್ಮ (65), ತಾಳೆಕೆರೆಯ ಜಯಲಕ್ಷ್ಮಮ್ಮ (42) ಮತ್ತು ಕಾಮಸಾಗರದ ಕುಮಾರ್ (25) ಮೃತ ದುರ್ದೈವಿಗಳು. ಇಂದು ಬೆಳಗ್ಗಿನ ಜಾವ ಸುಮಾರು 3 ಗಂಟೆಗೆ ಈ ದುರ್ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿ ಒಟ್ಟು ಐವರು ಮಾಗಡಿಯ ಕರೇನಹಳ್ಳಿಗೆ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದರು.
ಮದುವೆಗೆ ಮುಗಿಸಿ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಹುಚ್ಚನುಮೆಗೌಡನ ಪಾಳ್ಯದ ಬಳಿ ಚಾಲಕನ ಅಜಾಗರೂಕತೆಯಿಂದ ವೇಗವಾಗಿ ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
SCROLL FOR NEXT