ಎಚ್ ಡಿ ಕುಮರಸ್ವಾಮಿ 
ರಾಜ್ಯ

ಸದ್ಯ ಬಸ್ ಪ್ರಯಾಣ ದರ ಏರಿಕೆಗೆ ಸಿಎಂ ಬ್ರೇಕ್, ಪ್ರಯಾಣಿಕರು ನಿರಾಳ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಏರಿಕೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸದ್ಯಕ್ಕೆ ಬ್ರೇಕ್ ಹಾಕಿದ್ದು...

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಏರಿಕೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸದ್ಯಕ್ಕೆ ಬ್ರೇಕ್ ಹಾಕಿದ್ದು, ಪ್ರಯಾಣಿಕರು ನಿರಾಳರಾಗಿದ್ದಾರೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಾರಿಗೆ ಇಲಾಖೆ ಮತ್ತು ರಸ್ತೆ ಸಾರಿಗೆ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವವನ್ನು ಕೈಬಿಡಲಾಗಿದೆ.
ಬಸ್ ದರ ಏರಿಕೆ ಅನಿವಾರ್ಯತೆ ಕುರಿತಂತೆ ಸೂಕ್ತ ಸಮರ್ಥನೆಗಳೊಂದಿಗೆ ಮರು ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಕುಮಾರಸ್ವಾಮಿ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಸ್​ ದರವನ್ನು ಶೇಕಡವಾರು ಏರಿಕೆಗೆ ಸಂಬಂಧಿಸಿದಂತೆ ಹೊಸ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಕುಮಾರಸ್ವಾಮಿ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ, ಸಾರಿಗೆ ಇಲಾಖೆ ನಷ್ಟದಿಂದ ಹೊರಬರುವ ಬಗ್ಗೆ ಮಾರ್ಗೋಪಾಯದ ಬಗ್ಗೆಯೂ ಅಧಿಕಾರಿಗಳನ್ನು ಸಿಎಂ ಕೇಳಿದ್ದಾರೆ.
ಗಣನೀಯ ಪ್ರಮಾಣದಲ್ಲಿ ಏರುತ್ತಿರುವ ತೈಲ ಬೆಲೆ, ಕಳೆದ ಕೇಂದ್ರ ಬಜೆಟ್ ನಂತರ ಏರಿಕೆ ಆಗಿರುವ ವಾಹನಗಳ ಬಿಡಿ ಭಾಗಗಳು, ಏರಿಕೆ ಆಗಿರುವ ಸಾರಿಗೆ ನೌಕರರ ವೇತನ, ದುಬಾರಿ ಆಗಿರುವ ನಿರ್ವಹಣೆ ವೆಚ್ಚದ ಕುರಿತು ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದರು.
ಕಳೆದ ಹದಿನೆಂಟು ತಿಂಗಳಿಂದ ಬಸ್ ದರ ಏರಿಕೆ ಆಗದಿರುವ ಬಗ್ಗೆಯೂ ಮಾಹಿತಿ ನೀಡಿದರು. ಅಲ್ಲದೇ, ಸರ್ಕಾರ ಬಾಕಿ ಉಳಿಸಿಕೊಂಡ ಮೊತ್ತವನ್ನು ಬಿಡುಗಡೆ ಮಾಡುವಂತೆ ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT